ಜಿಲ್ಲಾ ಕೆ.ಡಿ.ಪಿ. ಸದಸ್ಯರಾಗಿ ಸುಜಯ ಕೃಷ್ಣ ನೇಮಕ

0


ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಿಶೀಲನಾ ಕೆಡಿಪಿ ಸಮಿತಿಗೆ ಐದು ಮಂದಿ ಸದಸ್ಯರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದ್ದು, ಸುಳ್ಯ ಬೀರಮಂಗಲದವರಾದ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಸುಜಯಕೃಷ್ಣರವರನ್ನು ಇದರ ಸದಸ್ಯರನ್ನಾಗಿ ನೇಮಿಸಲಾಗಿದೆ.