ನಾಗಪಟ್ಟಣ ಕಿರಿಯ ಪ್ರಾಥಮಿಕ ಶಾಲೆಗೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ಕೊಡುಗೆ

0

ಆಲೆಟ್ಟಿ ಗ್ರಾಮದ ನಾಗಪಟ್ಟಣ ಕಿರಿಯ ಪ್ರಾಥಮಿಕ ಶಾಲೆಗೆ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರವನ್ನು ಕೊಡುಗೆಯಾಗಿ ನಾಗಪಟ್ಟಣ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರು ನೀಡಿದರು.


ಪ್ರಾಥಮಿಕ ಶಾಲೆಯ 20 ಮಕ್ಕಳಿಗೆ ಮತ್ತು ಅಂಗನವಾಡಿ ಕೇಂದ್ರದ 15 ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲಾ ನಾಗಪಟ್ಟಣ, ಶಿಕ್ಷಕಿಯರಾದ ಶ್ರೀಮತಿ ಪುಷ್ಪಾ, ಶ್ರೀಮತಿ ನಳಿನಿ, ಕಿಶನ್ ಮತ್ತಿತರರು ಉಪಸ್ಥಿತರಿದ್ದರು.