ಪಂಜ: ಜಾತ್ರೋತ್ಸವದ ಪೂರ್ವಭಾವಿ ಸಭೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಪೂರ್ವಭಾವಿ ಸಭೆಯು ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರ್ ರವರ ಅಧ್ಯಕ್ಷತೆಯಲ್ಲಿ ಡಿ.23 ರಂದು ಜರುಗಿತು.


ದೇಗುಲದ ಆಡಳಿತಾಧಿಕಾರಿ ಸುಳ್ಯ ತಹಸೀಲ್ದಾರ್ ಮಂಜುನಾಥ್ ರವರು ಸಭೆಯ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ,ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ, ಪಂಜ ನಾಡಕಚೇರಿ ಉಪತಹಸೀಲ್ದಾರ್ ಚಂದ್ರಕಾಂತ್ ಎಮ್ ಆರ್, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ಕೇಶವ ಕುದ್ವ, ಮಾಯಿಲಪ್ಪ ಗೌಡ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಧರ್ಮಪಾಲ ಕಾಚಿಲ, ಅಶ್ವಿನ್ ಬಾಬ್ಲುಬೆಟ್ಟು , ಪಂಜ ಪರಿಸರದ ಆರಾಧನಾ ಸಮಿತಿ ಅಧ್ಯಕ್ಷರಾದ ಚಿನ್ನಪ್ಪ ಸಂಕಡ್ಕ ಉಪಸ್ಥಿತರಿದ್ದರು.


ಸಭೆಯಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ರಜಿತ್ ಭಟ್ ಪಂಜಬೀಡು, ಮೋನಪ್ಪ ನಾಯ್ಕ ಸೌಧಮಿನಿ
ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸದಸ್ಯರು ಊರ ಭಕ್ತಾಭಿಮಾನಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.