ಕನಕಮಜಲು ಹಾಲು ಉತ್ಪಾದಕ ಸಹಕಾರ ಸಂಘದ ಚುನಾವಣೆ

0

ಕನಕಮಜಲು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 13 ಸ್ಥಾನಗಳ ಪೈಕಿ ಒಟ್ಟು 10 ಮಂದಿ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಸ್ಥಾನದಿಂದ ಒಟ್ಟು ಏಳು ಮಂದಿ ನಿರ್ದೇಶಕರುಗಳ ಆಯ್ಕೆಯಾಗಬೇಕಿದ್ದು, ಕುಸುಮಾಧರ ಬೊಮ್ಮೆಟ್ಟಿ, ವಿಶ್ವನಾಥ ಗೌಡ ಕಣಜಾಲು, ಎನ್‌.ಕೆ. ಪುಟ್ಟಣ್ಣ ಗೌಡ, ಕೆ. ಗಂಗಾಧರ, ಕೆ.ಪಿ. ಮನೋಜ್ ಕುಮಾರ್ ಕಲ್ಲೂರಾಯ, ರಾಮ್ ಪ್ರಸಾದ್ ಭಟ್, ಕೆ. ಪುರುಷೋತ್ತಮ ಸೇರಿದಂತೆ ಏಳು ಮಂದಿ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರೆಲ್ಲರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌
ಮಹಿಳಾ ಸ್ಥಾನದಿಂದ ಇಬ್ಬರು ನಿರ್ದೇಶಕರ ಆಯ್ಕೆಯಾಗಬೇಕಿದ್ದು, ಲೋಲಾಕ್ಷಿ ಪಿ. ಹಾಗೂ ಡಿ. ಶೇಷಮ್ಮ ನಾಮಪತ್ರ ಸಲಿಸಿದ್ದು, ಅವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿ ಸ್ಥಾನದಿಂದ ಓರ್ವ ನಿರ್ದೇಶಕರ ಆಯ್ಕೆಯಾಗಬೇಕಿದ್ದು, ಪಿ. ಬಾಬು ಅವರು ಆಯ್ಕೆಯಾಗಿದ್ದಾರೆ.

ಇಲ್ಲಿ ಪ.ಪಂಗಡ ಮೀಸಲು ಸ್ಥಾನ, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನ ಹಾಗೂ ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಆದ್ದರಿಂದ 13 ಮಂದಿ ನಿರ್ದೇಶಕರುಗಳ ಪೈಕಿ ಒಟ್ಟು10 ಮಂದಿ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿ.18ರಿಂದ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಂಘದ ಕಛೇರಿಯಲ್ಲಿ ಕಾರ್ಯದರ್ಶಿಯವರಿಗೆ ಸಲ್ಲಿಸಲು ಅವಕಾಶವಿದ್ದು, ಡಿ.22ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.23ರಂದು ರಿಟರ್ನಿಂಗ್ ಅಧಿಕಾರಿಯಿಂದ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದ್ದು, ಎಲ್ಲಾ ಹತ್ತು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿದುಬಂದಿದೆ.