ಬಾನಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಕ್ರೀಡೋತ್ಸವ, ಸನ್ಮಾನ ಮತ್ತು ದತ್ತಿನಿಧಿ ವಿತರಣೆ

0

ಬಾನಡ್ಕ ಸ. ಕಿ .ಪ್ರಾ ಶಾಲೆಯಲ್ಲಿ ಡಿ. 16ರಂದು ಪ್ರತಿ ವರ್ಷದಂತೆ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣದ ಮೂಲಕ ಸೂರಪ್ಪ ಗೌಡ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶ್ರೀಮತಿ ಭಾರ್ಗವಿ ಕುಮಾರ್ ನಾಯರ್ ಕಾರ್ಯಕ್ರಮ ಉದ್ಘಾಟಿಸಿದರು.

ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಶ್ರೀಮತಿ ಪುಷ್ಪಾವತಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾ. ಪಂ. ಸದಸ್ಯರಾದ ಶಿವರಾಮ ನೆಕ್ರಾಜೆ, ಕಡಬ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಮಕೃಷ್ಣ ಮಲ್ಲಾರ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸುಜಯ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿಶ್ವನಾಥ ಬಾಲಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನಯ್ ನೆಕ್ರಾಜೆ, ವಿದ್ಯಾರ್ಥಿ ನಾಯಕಿ ಕು. ಹಸ್ತ, ಮುಖ್ಯ ಶಿಕ್ಷಕಿ ಶ್ರೀಮತಿ ಜಾನಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವನಾಥ ಬಾಲಾಡಿ ಸ್ವಾಗತಿಸಿ, ವಾಸುದೇವ ಬಿ ವಂದಿಸಿದರು. ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಸಂಜೆ ಸಮರೋಪ ಸಮಾರಂಭ ನಡೆಯಿತು. ನಿಕಟಪೂರ್ವ ಸದಸ್ಯರಾದ ಅಶೋಕ್ ನೆಕ್ರಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸುಬೇದಾರ್ ಹೊನ್ನಪ್ಪ ಗೌಡ ಕಟ್ಟ ಇವರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಜಾತ ವಹಿಸಿದ್ದರು. ಗ್ರಾ.ಪಂ. ಸದಸ್ಯೆ ಶ್ರೀಮತಿ ಭವ್ಯ ಮೋಹಿತ್ ಜೇನುಕೋಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಚಂದ್ರಶೇಖರ ನಾಯರ್ ಎಸ್.ಡಿ.ಎಂ.ಸಿ ಅಧ್ಯಕ್ಷ ವಿಶ್ವನಾಥ್ ಬಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿನಯ್ ನೆಕ್ರಾಜೆ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಯಮುನ, ಹಿರಿಯರಾದ ಉದಯ್ ಕುಮಾರ್ ಬಾನಡ್ಕ, ವಿದ್ಯಾರ್ಥಿ ನಾಯಕಿ ಕು. ಹಸ್ತ, ಮುಖ್ಯ ಶಿಕ್ಷಕಿ ಶ್ರೀಮತಿ ಜಾನಕಿ ಕೆ ಉಪಸ್ಥಿತರಿದ್ದರು.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ದತ್ತಿನಿಧಿ ನೀಡಿ ಗೌರವಿಸಲಾಯಿತು. ವಿನಯ್ ನೆಕ್ರಾಜೆ ಸ್ವಾಗತಿಸಿ ಮುಖ್ಯ ಶಿಕ್ಷಕಿ ಜಾನಕಿ ವಂದಿಸಿದರು. ಶ್ರೀಮತಿ ಸುಜಯ ಕಾರ್ಯಕ್ರಮ ನಿರೂಪಿಸಿದರು.