ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೀರು ಬಂಡಿ ಉತ್ಸವ

0

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.24 ರಂದು ನೀರು ಬಂಡಿ ಉತ್ಸವ ನಡೆಯಿತು.

ಮಾರ್ಗಶಿರ ಶುದ್ಧ ದ್ವಾದಶಿಯ ನಿನ್ನೆಯ ದಿನ ಕೊಪ್ಪರಿಗೆ ಇಳಿಯುವುದರೊಂದಿಗೆ ವಾರ್ಷಿಕ ಚಂಪಾಷಷ್ಠಿ ಜಾತ್ರೆ ಮುಕ್ತಾಯಗೊಂಡಿತು. ರಾತ್ರಿ ದೇವಳದ ಹೊರಾಂಗಣದಲ್ಲಿ ನೀರಿನಲ್ಲಿ ಬಂಡಿ ಉತ್ಸವ ನಡೆದು, ಗೋಪುರ ನಡಾವಳಿಯು ನಡೆಯಿತು . ದೇವಾಲಯದ ಆನೆ ಯಶಸ್ವಿ ನೀರಾಟವಾಡಿತು.

ಭಕ್ತಾಧಿಗಳು, ಮಕ್ಕಳು ನೀರಿನಲ್ಲಿ ಆಟವಾಡಿ ಸಂಭ್ರಮಿಸಿದರು. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಸಾವಿರಾರು ಭಕ್ತರು ಪಾಲ್ಗೊಂಡರು.