ಕೆ.ವಿ.ಜಿ. ಸುಳ್ಯಹಬ್ಬ ಸಮಿತಿ ಕಚೇರಿಯಲ್ಲಿ ದಿ.ಕುರುಂಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

0

ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ 95 ನೇ ಜನ್ಮದಿನವಾದ ಇಂದು ಬೆಳಿಗ್ಗೆ ಕೆ.ವಿ.ಜಿ. ಸುಳ್ಯಹಬ್ಬ ಸಮಿತಿ ಕಚೇರಿಯಲ್ಲಿ ಡಾ.ಕುರುಂಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಸಮಿತಿ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು. ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಪುಷ್ಪಾರ್ಚನೆಗೈದರು. ಬಳಿಕ ಪದ್ಮ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಭಾರದ್ವಾಜ್ ಹಾಗೂ ಸಮಿತಿಯ ಪದಾಧಿಕಾರಿಗಳು ಪುಷ್ಪಾರ್ಚನೆಗೈದರು.