ಸಜ್ಜನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಡಿ.6 ರಂದು ಗೂನಡ್ಕ ಸಜ್ಜನ ಸಭಾಂಗಣದಲ್ಲಿ ನಡೆಯಲಿರುವ ಸಜ್ಜನ ಸಿರಿ ಪ್ರಶಸ್ತಿ ಪ್ರದಾನ ಹಾಗೂ ಸಜ್ಜನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ತಹಶೀಲ್ದಾರ್ ಮಂಜುನಾಥ್ ರವರು ಸುಳ್ಯ ನಗರ ಪಂಚಾಯತ್ ನಲ್ಲಿ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ, ಸಜ್ಜನ ಪ್ರತಿಷ್ಠಾನದ ಸಲೀಂ ಪೆರುಂಗೋಡಿ, ಉನೈಸ್ ಗೂನಡ್ಕ ನಗರ ಪಂಚಾಯತ್ ಸದಸ್ಯರುಗಳಾದ ಶರೀಫ್ ಕಂಠಿ, ದೀರಾ ಕ್ರಸ್ತಾ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ ಮೊದಲಾದವರು ಉಪಸ್ಥಿತರಿದ್ದರು.