ಮೊರಂಗಲ್ಲು ಮುತ್ತಪ್ಪ ಪೂಜಾರಿ ಯವರ ಗೃಹ ಪ್ರವೇಶಕ್ಕೆ ಆಗಮಿಸಿದ ಆರಿಕೋಡಿ ಧರ್ಮದರ್ಶಿಗಳು

0

ಆಲೆಟ್ಟಿ ಗ್ರಾಮದ ಮೊರಂಗಲ್ಲು ನಿವಾಸಿ ಆಲೆಟ್ಟಿ ಪಂಚಾಯತ್ ಸದಸ್ಯ ಮುತ್ತಪ್ಪ ಪೂಜಾರಿ ಯವರು ಮೊರಂಗಲ್ಲಿನಲ್ಲಿ ನೂತನವಾಗಿ ನಿರ್ಮಿಸಿರುವ “ಕೃಷ್ಣ ನಿಲಯ”ದ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಯವರು ಆಗಮಿಸಿ ಶುಭಾಶೀರ್ವದಿಸಿದರು.

ಡಿ.28 ರಂದು
ಬೆಳಗ್ಗೆ ಪುರೋಹಿತ ವೆಂಕಟೇಶ ಶಾಸ್ತ್ರಿ ಯವರ ನೇತೃತ್ವದಲ್ಲಿ ಗಣಪತಿ ಹವನ ಹಾಗೂ ಶ್ರೀ ಸತ್ಯ ನಾರಾಯಣ ದೇವರ ಪೂಜೆಯು ನೆರವೇರಿತು.
ಈ ಸಂದರ್ಭದಲ್ಲಿ ಮೊರಂಗಲ್ಲು ಶ್ರೀ ಧೂಮಾವತಿ ದೈವಸ್ಥಾನದ ಅಧ್ಯಕ್ಷ ಗುರುಪ್ರಸಾದ್ ರೈ ಮೊರಂಗಲ್ಲು ರವರು ಧರ್ಮದರ್ಶಿ ಯವರನ್ನು ಗೌರವಿಸಿ ಸನ್ಮಾನಿಸಿದರು.
ಮನೆಯವರು ಹಾಗೂ ಸ್ಥಳೀಯ ಮಹಿಳೆಯರು ಧರ್ಮದರ್ಶಿ ಯವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು.
ಆಲೆಟ್ಟಿ ಸದಾಶಿವ ಭಜನಾ ಸಂಘದ ಸದಸ್ಯರಿಂದ ಗೃಹ ಪ್ರವೇಶದ ಪ್ರಯುಕ್ತ ಬೆಳಗ್ಗಿನಿಂದ ಮಧ್ಯಾಹ್ನ ತನಕ ಭಜನಾ ಕಾರ್ಯಕ್ರಮವು ನಡೆಯಿತು.