ಕಡಬ ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕರಾಗಿ ಎರಡನೇ ಬಾರಿಗೆ ಕಡಬದ ಶಿವಪ್ರಸಾದ್ ನೂಚಿಲ ಆಯ್ಕೆ

0

ಎಡಮಂಗಲ: ಶಿವಪ್ರಸಾದ್ ನೂಚಿಲ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಎಡಮಂಗಲ ಗ್ರಾಮದ ನೂಚಿಲ ಶಿವಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2023-24ನೇ ಸಾಲಿನ ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಆಯ್ಕೆಯಾಗಿರುವುದಾಗಿ ಘೋಷಿಸಲಾಯಿತು.

ದಕ್ಷಿಣ ಕನ್ನಡ, ಉಡಪಿ, ಬೆಂಗಳೂರು ಸೇರಿದಂತೆ 33 ಘಟಕಗಳು ಹೊಂದಿದೆ. ಸುಮಾರು 4000 ಹೆಚ್ಚು ಜನ ಸದಸ್ಯ ಹೊಂದಿರುವ ಸಂಸ್ಥೆ,
ಇವರು ಕಡಬ ಘಟಕದಲ್ಲಿ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಕ್ರೀಡಾ ನಿರ್ದೇಶಕರಾಗಿಯೂ ಆಯ್ಕೆಯಾಗಿ ಹಲವು ಜವಾಬ್ದಾರಿ ಗಳನ್ನು ನಿಭಾಯಿಸಿದ್ದಾರೆ. ಮತ್ತು ಹಲವಾರು ಸಂಘ ಸಂಸ್ಥೆಯಲ್ಲಿ ಜವಾಬ್ದಾರಿ ನಡೆಸುತ್ತಿದ್ದಾರೆ.ಪ್ರಸ್ತುತ ಇವರು ಉಪ್ಪಿನಂಗಡಿ. ಕಡಬಯಲ್ಲಿ ಕೊರಿಯರ್ ಸರ್ವಿಸ್ ಸಂಸ್ಥೆಯನ್ನು ನಡೆಸುತ್ತಿದ್ದಾರೆ.