ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಪ್ರಾರಂಭ

0

ಜ.11 ರಂದು ರಥೋತ್ಸವ

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವವು ಜ.3 ರಂದು ಉಗ್ರಾಣ ಮುಹೂರ್ತದೊಂದಿಗೆ ಪ್ರಾರಂಭಗೊಂಡಿದ್ದು ಜ.13 ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಕೆ.ಯು.ಪದ್ಮನಾಭ ತಂತ್ರಿಗಳವರ ಮಾರ್ಗದರ್ಶನದಲ್ಲಿ ನಡೆಯಲಿರುವುದು.
ಡಿ.28 ರಂದು ಮುಹೂರ್ತದ ಗೊನೆ ಕಡಿಯಲಾಯಿತು.
ಜ.03 ರಂದು ಬೆಳಿಗ್ಗೆ ಉಗ್ರಾಣ ತುಂಬಿಸಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ,ಸಮಿತಿ ಸದಸ್ಯರಾದ
ಲಿಂಗಪ್ಪಗೌಡ ಕೇರ್ಪಳ
ಮೀನಾಕ್ಷಿ ಗೌಡ,ರಮೇಶ ಬೈಪಾಡಿತ್ತಾಯ,ವೀರಕೇಸರಿ ಕರಣಿಕರಮನೆ,
ಗಿರಿಜಾಶಂಕರ ತುದಿಯಡ್ಕ,
ವಿದ್ಯಾನಂದ
ರಾಮಕೃಷ್ಣ ಮುರೂರು,ಕೃಪಾಶಂಕರ ತುದಿಯಡ್ಕ, ಕಮಲಾಕ್ಷಿ ಟೀಚರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಸಂಜೆ ಪನ್ನೆಬೀಡು ನಾಲ್ಕು ದೈವಗಳ ಚಾವಡಿಯಿಂದ ಬಲ್ಲಾಳರ ಪಯ್ಯೋಳಿ ತರುವುದು.
ರಾತ್ರಿ ಕುಕ್ಕನ್ನೂರು ದೈವಗಳ ಭಂಡಾರ ಬರುವುದು,ನಂತರ ಧ್ವಜಾರೋಹಣ ನಡೆಯಲಿರುವುದು.


ಜ.05 ರಂದು ಬೆಳಿಗ್ಗೆ ಪನ್ನೆಬೀಡು ಶ್ರೀ ಭಗವತಿ ಸ್ಥಾನದಲ್ಲಿ ಪ್ರತಿಷ್ಠಾ ದಿನ ಮಹಾಪೂಜೆ ನಡೆಯಲಿರುವುದು.
ಜ.07 ರಂದು ಸಂಜೆ ಗಂಟೆ 4.00 ರಿಂದ ಸಂಸ್ಕಾರದಿಒಪಿಕೆ,ಸುಳ್ಯ ಶ್ರೀ ಚೆನ್ನಕೇಶವ ದೇವಾಲಯ ಇಲ್ಲಿನ ವಿದ್ಯಾರ್ಥಿಗಳಿಂದ ಭಗವದ್ಗೀತಾ ಪಠಣ ಮತ್ತು ಸಾಮೂಹಿಕ ವಿಷ್ಣುಸಹಸ್ರನಾಮ ಪಾರಾಯಣ ನಡೆಯಲಿದೆ.


ಸಾಯಂಕಾಲ ಗಂಟೆ 7.00 ರಿಂದ “ಸುಳ್ಯೋತ್ಸವ” ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಜ.08 ರಂದು ರಾತ್ರಿ ಉತ್ಸವ ಬಲಿ ಹೊರಡುವುದು.ಜ.09 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಲಿದೆ.
ಜ.09 ರಂದು ಬೆಳಿಗ್ಗೆ ಸಣ್ಣ ದರ್ಶನ ಬಲಿ,ನಡುಬೆಳಗು,ಬಟ್ಟಲು ಕಾಣಿಕೆ ನಡೆಯಲಿದೆ.
ರಾತ್ರಿ ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ವಿವೇಕಾನಂದ ವೃತ್ತ ಹಳೆಗೇಟು,ಹೊಸಗದ್ದೆ,ಹಳೆಗೇಟು ಕಟ್ಟೆ,ಸಮೃತಭವನ,ರಾಮಮಂದಿರ,ಜಟ್ಟಿಪಳ್ಳ ಕಟ್ಟೆ ಪೂಜೆಗಳು ನಡೆಯಲಿದೆ .ಜ.10ರಂದು ಬೆಳಿಗ್ಗೆ ಅಜ್ಜಾವರ ಶ್ರೀ ಶಂಕರ ಭಾರತೀ ವೇದ ಪಾಠ ಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ,ರಾತ್ರಿ ಮಿತ್ತೂರು ದೈವಗಳ ಭಂಡಾರ ಬರುವುದು,ಕಾನತ್ತಿಲ ದೈವಗಳ ಭಂಡಾರ ಬರುವುದು,ವಾಲಸಿರಿ ಉತ್ಸವ ನಡೆಯುವುದು.
ಜ.11ರಿಂದ ಬೆಳಿಗ್ಗೆ ದೊಡ್ಡ ದರ್ಶನ ಬಲಿ,ಬಟ್ಟಲು ಕಾಣಿಕೆ ನಡೆಯಲಿದೆ.
ರಾತ್ರಿ ಕಲ್ಕುಡ ದೈವಗಳ ಭಂಡಾರ ಬರುವುದು ಬಳಿಕ ರಥೋತ್ಸವ ನಡೆಯಲಿದೆ.
ಜ.12 ರಂದು ಬೆಳಿಗ್ಗೆ ಆರಾಟ ಬಾಗಿಲು ತೆರೆಯುವುದು,ನಂತರ ಶ್ರೀ ಕಾಂಚಿ ಕಾಮಕೋಟಿ ವೇದ ವಿದ್ಯಾಲಯ ಭಾರದ್ವಾಜಾಶ್ರಮ ಅರಂಬೂರು ವೇದ ಪಾಠಶಾಲಾ ವಿದ್ಯಾರ್ಥಿಗಳಿಂದ ವೇದ ಪಾರಾಯಣ,ಮದ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಬಜಪ್ಪಿಲ ದೈವಗಳ ಭಂಡಾರ ಬರುವುದು,ಉತ್ಸವ ಬಲಿ ಹೊರಟು ಪಟ್ಟಣ ಸವಾರಿ,ಆರಕ್ಷಕ ಠಾಣಾ ಕಟ್ಟೆಯಿಂದ ಗಾಂಧಿನಗರ,ಅರಣ್ಯ ಇಲಾಖೆ,ಕೇರ್ಪಳ,ತಾಲೂಕು ಕಚೇರಿ,ಪಯಸ್ವಿನಿ ನದಿ ಬಳಿ ಕಟ್ಟೆ ಪೂಜೆಗಳು,ಅವಭೃತ ಸ್ನಾನವಾಗಿ ಬಂದು ದರ್ಶನ ಬಲಿ,ಬಟ್ಟಲು ಕಾಣಿಕೆ,ಧ್ವಜಾವರೋಹಣ ನಡೆಯಲಿದೆ.ಜ.13 ರಂದು ಮಧ್ಯಾಹ್ನ ಸಂಪ್ರೋಕ್ಷಣೆ,ಮಂತ್ರಾಕ್ಷತೆ ನಡೆಯಲಿದೆ.