ಜ. 6: ಸುಬ್ರಹ್ಮಣ್ಯದಲ್ಲಿ ಕೇನ್ಯ ಗಿರಿನಾಥ ಶೆಟ್ಟಿ ಮತ್ತು ಕೇನ್ಯ ರವೀಂದ್ರನಾಥ ಶೆಟ್ಟಿ ದಂಪತಿಗಳ ವೈವಾಹಿಕ ಸುವರ್ಣ ಮಹೋತ್ಸವ ಶುಭಾಶಂಸನಾ ಕಾರ್ಯಕ್ರಮ

0

ಕೇನ್ಯ ಗಿರಿನಾಥ ಶೆಟ್ಟಿ ಮತ್ತು ಶ್ರೀಮತಿ ಮನಮೋಹಿನಿ ಗಿರಿನಾಥ ಶೆಟ್ಟಿ ಹಾಗೂ ಕೇನ್ಯ ರವೀಂದ್ರನಾಥ ಶೆಟ್ಟಿ ಮತ್ತು ಶ್ರೀಮತಿ ನಿರಂಜಿನಿ ರವೀಂದ್ರನಾಥ ಶೆಟ್ಟಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಸಂಭ್ರಮದ ಅಂಗವಾಗಿ ಶುಭಾಶಂಸನಾ ಕಾರ್ಯಕ್ರಮ ಜ 6ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 10.40ಕ್ಕೆ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಪ್ಪಣ್ಣ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ರಮಾನಾಥ ರೈ ಸನ್ಮಾನ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ. ಶೆಟ್ಟಿ, ಸುಬ್ರಹ್ಮಣ್ಯದ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಎನ್. ಕೇಶವ ಭಟ್, ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈ, ಸಾಮಾಜಿಕ ಕಾರ್ಯಕರ್ತ ಎಂ.ಬಿ. ಸದಾಶಿವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪರ್ತಕರ್ತ ಪಿ.ಬಿ. ಹರೀಶ್ ರೈ‌ ಮತ್ತು ಸಿವಿಲ್ ಇಂಜಿನಿಯರ್ ಮಾರ್ಕೋಡ್ ಸುಧೀರ್ ಕುಮಾರಿ ಶೆಟ್ಟಿ ಕೋಟೇಶ್ವರ ಇವರಿಗೆ ಗೌರವ ಸನ್ಮಾನ ನಡೆಯಲಿದೆ. ಮಧ್ಯಾಹ್ನ ಸಹಭೋಜನ ನಡೆಯಲಿದೆ. ಪ್ರಾತಃಕಾಲ ಕೇನ್ಯ ಕಿರಣ ನಿಲಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇ.ಮೂ. ರಾಜೇಶ್ ಅಸ್ರಣ್ಣರ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನಡೆಯಲಿದೆ.