ಬಡ್ಡಡ್ಕ: ಗೂಡಿಂಜದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0

ಆಲೆಟ್ಟಿ ಗ್ರಾಮದ ಬಡ್ಡಡ್ಕ ದ ಗೂಡಿಂಜ ನಿವಾಸಿ ದಿ.ಚಳ್ಳಂಗಾರು ರಾಮಣ್ಣ ಗೌಡ ರವರ ಪುತ್ರ ಜಗದೀಶ್ ಚಳ್ಳಂಗಾರು (58) ಎಂಬವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.

ಗೂಡಿಂಜ ಎಂಬಲ್ಲಿ ಮೃತರ ಮನೆ ಇದ್ದು ಇಂದು ಮುಂಜಾನೆ ಮನೆಯವರು ಎದ್ದು ನೋಡಿದಾಗ ಮನೆಯಲ್ಲಿ ಅವರು ಕಾಣಿಸಲಿಲ್ಲ. ಹುಡುಕಾಟ ನಡೆಸಿದಾಗ ಮನೆಯ ಮೇಲ್ಭಾಗದಲ್ಲಿರುವ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತ ದೇಹ ಕಂಡು ಬಂದಿದೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರಾದ ದಿವಿನ್ ರಾಜ್, ಜೀವನ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರು ಕೃಷಿಕರಾಗಿದ್ದು ಉತ್ತಮಕ್ರೀಡಾಪಟುವಾಗಿದ್ದರು. ಸ್ಥಳೀಯ ಅಯ್ಯಪ್ಪ ಭಜನಾ ಮಂದಿರದ ಸದಸ್ಯರಾಗಿ ಹಾಗೂ ಬಿಜೆಪಿ ಪಕ್ಷದಲ್ಲಿ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿದ್ದರು. ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ.