ಮಡಪ್ಪಾಡಿ : ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ

0

ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಹಾಗೂ ಯುವಕ ಮಂಡಲ ಮಡಪ್ಪಾಡಿ ವತಿಯಿಂದ ಆಯೋಧ್ಯೆಯ ರಾಮಮಂದಿರದ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸುವ ಕಾರ್ಯಕ್ರಮ ಮಡಪ್ಪಾಡಿಯಲ್ಲಿ ಜ.1ರಿಂದ ಪ್ರಾರಂಭಗೊಂಡಿತು.
ಆರು ದಿನಗಳ ಕಾಲ ಗ್ರಾಮದ ಪ್ರತಿ ಮನೆಗೆ ವಿತರಿಸುವ ಈ ಕಾರ್ಯದಲ್ಲಿ ಭಜನಾ ಮಂಡಳಿ ಹಾಗೂ ಯುವಕ ಮಂಡಲದ ಸದಸ್ಯರು ಹಾಗೂ ಎಲ್ಲಾ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.