ಗುತ್ತಿಗಾರು: ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆ

0

ಕೆ.ಪಿ.ಯಸ್ ಬೆಳ್ಳಾರೆ ಪ್ರಥಮ, ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ದ್ವಿತೀಯ

ಸೈಂಟ್ ಮೇರಿಸ್ ಚರ್ಚ್ ಗುತ್ತಿಗಾರು, ಹಾಗೂ ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ, ಗುತ್ತಿಗಾರು , ಕೆ.ಎಸ್.ಎಂ.ಸಿ.ಎ. ಗುತ್ತಿಗಾರು ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ “ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟ ಉಸಿರಾಗಲಿ ಕನ್ನಡ” ಬೆಳ್ತಂಗಡಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವ ಪ್ರಯುಕ್ತ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ ನಾಡ ಗೀತೆ ಸ್ಪರ್ಧೆಯು ಡಿ. 5 ರಂದು ಬೆಸ್ಡ್ ಕುರಿಯಾಕೋಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ರವರು ಉದ್ಘಾಟಿಸಿದರು.

ಅಧ್ಯಕ್ಷ ಸ್ಥಾನವನ್ನು ಸೈಂಟ್ ಮೇರಿಸ್ ಚರ್ಚ್ ನ ಧರ್ಮ ಗುರುಗಳಾದ ಫಾದರ್ ಆದರ್ಶ ಜೋಸೆಫ್ ವಹಿಸಿದ್ದರು. ಮುಖ್ಯಅತಿಥಿಯಾಗಿ ಎಸ್.ಎಸ್.ಪಿ. ಯು ಕಾಲೇಜು ಸುಬ್ರಹ್ಮಣ್ಯದ ಕನ್ನಡ ಮತ್ತು ಸಂಸ್ಕೃತ ಉಪನ್ಯಾಸ ಕರಾದ ರಘು. ಬಿಜೂರ್, ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಅಧ್ಯಕ್ಷರಾದ ಮಹೇಶ್ ಪುಚ್ಚಾಪ್ಪಾಡಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸೈಂಟ್ ಮೇರಿಸ್ ಚರ್ಚ್ ನ ಟ್ರಸ್ಟಿಗಳಾದ ಟಿ.ಜಿ.ಪಿ ಎಫ್, ಮತ್ತು ಸೈಜು .ಸಿ.ಪಿ., ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ರಾದ ಲಿಜೋ ಜೋಸ್ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಕೆ ಎಸ್. ಎಂ. ಸಿ.ಎ. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಅಧ್ಯಕ್ಷರಾದ ಬಿಟ್ಟಿ ನೆಡುನಿಲಂ ಸ್ವಾಗತಿಸಿ, ಬೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಪ್ರೌಢಾಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಟೀಸಾ ಜಾನ್
ವಂದಿಸಿದರು, ಪ್ರೌಢ ಶಾಲಾ ವಿಭಾಗದ ಕನ್ನಡ ಶಿಕ್ಷಕಿ ಶಾಂತಕುಮಾರಿ ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ
ತಾಲೂಕಿನ ಹನ್ನೊಂದು ಶಾಲೆಗಳಿಂದ 110 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಥಮ ಸ್ಥಾನ ಪಡೆದ ಕೆ.ಪಿ.ಯಸ್ ಬೆಳ್ಳಾರೆ 15 ಸಾವಿರ ರೂಪಾಯಿ ನಗದು ಬಹುಮಾನ, ದ್ವಿತೀಯ ಸ್ಥಾನ ಪಡೆದ ಬಹುಮಾನ ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು 10 ಸಾವಿರ ರೂಪಾಯಿ ನಗದು,
ತೃತೀಯಾ ಬಹುಮಾನ ಪಡೆದ ಸರಕಾರಿ ಪ್ರೌಢ ಶಾಲೆ ಮರ್ಕಂಜ ಏಳು ಸಾವಿರ ರೂಪಾಯಿ ನಗದು ಹಾಗೂ ವೈಯಕ್ತಿಕ ಟ್ರೋಫಿ , ಸ್ಮರಣಿಕೆಯನ್ನು ಪಡೆದುಕೊಂಡವು.