ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ,ಕುಮಾರಮಂಗಲ ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್,ಜಯಪ್ರಕಾಶ್ ರೈ ಬಿ,ಪಿ.ಜಗನ್ನಾಥ ರೈ, ಶ್ರೀಮತಿ ಯಶೋಧ ಎ.ಎಸ್‌.
ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಉಮೇಶ್ ಕೆ.ಎಂ.ಬಿ,ನಿರಂಜನ ಶೆಟ್ಟಿ ಪೆರುವಾಜೆ, ಜಗನ್ನಾಥ ರೈ, ಗ್ರಾ.ಪಂ.ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ,ಅಮರನಾಥ ಶೆಟ್ಟಿ, ಭೋಜರಾಜ ಶೆಟ್ಟಿ,ವಿಜಯ ಆಚಾರ್ಯ,ಪ್ರೀತಂ ರೈ, ಸಚಿನ್ ರಾಜ್ ಶೆಟ್ಟಿ,ವಿಠಲ ಶೆಟ್ಟಿ,ಕುಶಾಲಪ್ಪ ಪೆರುವಾಜೆ,ಕೇಪು ಗೌಡ,ನೇಮ ಪರವ,ಕೋಟಿ ಪರವ , ಕಿರಣ್ ಕುಮಾರ್ ಕೆ ,ಯತೀಶ ಬಾಳಿಲ, ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.