ಸುಳ್ಯ ಸಿ.ಎ.ಬ್ಯಾಂಕ್ : ಅಧ್ಯಕ್ಷ, ಉಪಾಧ್ಯಕ್ಷ , ನಿರ್ದೇಶಕರಿಗೆ ಶಾಸಕರಿಂದ ಗೌರವ

0

ಸಿ.ಎ.ಬ್ಯಾಂಕ್ ನಲ್ಲಿ ಯುವಕರಿಗೆ ಆದ್ಯತೆ : ಕಂಜಿಪಿಲಿ

ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ವಿಕ್ರಂ ಅಡ್ಪಂಗಾಯ, ಉಪಾಧ್ಯಕ್ಷ ರಾಗಿ ಆಯ್ಕೆಯಾದ ಚಂದ್ರಶೇಖರ ನಡುಮನೆ ಹಾಗೂ ಎಲ್ಲ ನಿರ್ದೇಶಕರನ್ನು ಶಾಸಕಿ ಭಾಗೀರಥಿ ಮುರುಳ್ಯ ಗೌರವಿಸಿದರು.

ಬಳಿಕ ಮಾತನಾಡಿದ ಶಾಸಕರು, ಯುವಕರಿಗೆ ಆದ್ಯತೆ ನೀಡಲಾಗಿದೆ. ಹಿರಿಯರ ಮಾರ್ಗದರ್ಶನ ಸಲಹೆ ಪಡೆದು ಬ್ಯಾಂಕ್ ಉನ್ನತೀಕರಣಕ್ಕೆ ಇವರ ಕೊಡುಗೆ ಸಿಗಲಿ ಎಂದು ಹಾರೈಸಿದರು.

ಬಿಜೆಪಿ ಮಂಡಲಾಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ, ಈ ಬಾರೀ ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷತೆಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದೆ. ಎಲ್ಲ ನಿರ್ದೇಶಕರ ಅಭಿಪ್ರಾಯದಂತೆ ಆಯ್ಕೆ ಮಾಡಲಾಗಿದೆ. ಬ್ಯಾಂಕ್ ನ ಅಭಿವೃದ್ಧಿಗೆ ಇವರು ಎಲ್ಲರ ಸಲಹೆ ಪಡೆದು ಕೆಲಸ ಮಾಡಬೇಕು. ಪಕ್ಷ ಮತ್ತು ಸಂಘಟನೆ ಬಲ ಪಡಿಸಲು ಹೆಚ್ಚಿನ ಕೆಲಸ ಮಾಡಬೇಕು ಎಂದು ಹೇಳಿದರು.

ಸಿ.ಎ.ಬ್ಯಾಂಕ್ ನೂತನ ಅಧ್ಯಕ್ಷ ವಿಕ್ರಂ ಅಡ್ಪಂಗಾಯ ಮಾತನಾಡಿ, ಹಿರಿಯರ ನಂಬಿಕೆಯಂತೆ ನಾನು ಕೆಲಸ ಮಾಡುತ್ತೇನೆ ಎಂದರು.
ನೂತನ ಉಪಾಧ್ಯಕ್ಷ ಚಂದ್ರಶೇಖರ ನಡುಮನೆ, ಬಾಲಗೋಪಾಲ ಸೇರ್ಕಜೆ, ಶೀನಪ್ಪ ಬಯಂಬು, ವೆಂಕಟ್ರಮಣ ಮುಳ್ಯ ವೇದಿಕೆಯಲ್ಲಿ ಇದ್ದರು.
ವಿನಯ ಕುಮಾರ್ ಕಂದಡ್ಕ ಸ್ವಾಗತಿಸಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಕಾರ್ಯಕ್ರಮ ನಿರೂಪಿಸಿದರು.