ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದಿಂದ ಚೆನ್ನಕೇಶವ ದೇವಾಲಯಕ್ಕೆ ಹಸಿರುವಾಣಿ

0

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ ಯಂ ಯಸ್ ಸಂಯೋಜಿತ ಇದರ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅನ್ನದಾನಕ್ಕೆ ಹಸಿರುವಾಣಿಯನ್ನು ಮೆರವಣಿಗೆ ಮೂಲಕ ಚೆನ್ನಕೇಶವ ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಮರ್ಕಂಜ, ಕೋಶಾಧಿಕಾರಿ ನಿತ್ಯಾನಂದ ಬಿ, ಉಪಾಧ್ಯಕ್ಷ ರವಿ ಜಾಲ್ಸೂರು, ಮಾಜಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ ಮತ್ತು ಕಾರ್ಯಕಾರಿ ಸಮಿತಿಯ ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು. ನಮ್ಮ ಸಂಘದ ಅದ್ಯಕ್ಷರು ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವ ಹಾಗೂ ನಮ್ಮಸಂಘದ ಎಲ್ಲಾ ಸದಸ್ಯರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು ಹಾಗೂ ನಮ್ಮ ಸಂಘದ ಕೆಲವು ಸದಸ್ಯರು ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಹಾಗೂ ಇತರ ಕಾರ್ಯಕ್ರಮಕ್ಕೆ ಶುಭ ಕೋರುವ ಬ್ಯಾನರ್ ಹಾಕಿದ್ದು ಇದನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರಿಂದ ಅದನ್ನು ಹರಿದು ಹಾಕಿದವರನ್ನು ಅತೀ ಶೀಘ್ರದಲ್ಲಿ ತೋರಿಸಿ ಕೊಡಬೇಕೆಂದು ಪ್ರಾರ್ಥನೆ ಮಾಡಲಾಯಿತು.