ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

0

ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿಯಾದ ಕು || ಸುಲೋಚನಾ ಪಿ ಕೆ ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು.

ಸಮಾರಂಭದ ವೇದಿಕೆಯಲ್ಲಿ ಹಿರಿಯರಾದ ಸುಕುಮಾರ ಗೌಡ, ತಹಸೀಲ್ದಾರರಾದ ಶಿವಶಂಕರ್ , ಶಿಕ್ಷಣ ಚಿಂತಕ ಗೋಪಾಡ್ಕರ್, ಕಸಾಪ ಪುತ್ತೂರು ತಾಲೂಕು ಘಟಕದ ಉಮೇಶ್ ನಾಯಕ್, ಲೇಖಕಿ ಸುಲೋಚನಾ ಪಿ ಕೆ, ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ, ರಂಗ ತರಂಗದ ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ, ಖ್ಯಾತ ನಿರೂಪಕ ಬಾಲಕೃಷ್ಣ ಪೊರ್ಧಾಳ್ ಇನ್ನಿತರರು ಉಪಸ್ಥಿತರಿದ್ದರು.