ದ.ಕ ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತು ಜಿಲ್ಲಾ ಸಮಿತಿ ಸದಸ್ಯರಾಗಿ ಹರೀಶ್ ಬಂಟ್ವಾಳ್ ನೇಮಕ

0

ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಅಧ್ಯಕ್ಷರಾಗಿ ಚಂದ್ರಾವತಿ ಬಡ್ಡಡ್ಕ,ಪಂಜ ಹೋಬಳಿ ಅಧ್ಯಕ್ಷರಾಗಿ ಬಾಬು ಗೌಡ ಅಚ್ರಪ್ಪಾಡಿ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಮಂಡಳಿಗೆ ಹೊಸ ಸದಸ್ಯರನ್ನು ಮತ್ತು ಜಿಲ್ಲೆಯ ತಾಲೂಕಿನ ಹೋಬಳಿ ಘಟಕಕ್ಕೆ ಅಧ್ಯಕ್ಷರುಗಳನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅನುಮೋದನೆಯೊಂದಿಗೆ ನೇಮಕ ಮಾಡಲಾಗಿದೆ.

ದ.ಕ‌.ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಸುದ್ದಿ ಬಿಡುಗಡೆ ಪತ್ರಿಕೆ ಪ್ರಧಾನ ವರದಿಗಾರರಾದ ಹರೀಶ್ ಬಂಟ್ವಾಳ್ ರವರನ್ನು ನೇಮಕ ಮಾಡಲಾಗಿದೆ.

ಸುಳ್ಯ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಸಾಹಿತಿ ಚಂದ್ರಾವತಿ ಬಡ್ಡಡ್ಕ ಮತ್ತು ಪಂಜ ಹೋಬಳಿ ಅಧ್ಯಕ್ಷರಾಗಿ ನಿವೃತ್ತ ಪ್ರಾಚಾರ್ಯ ಹಾಗೂ ಲೇಖಕ ಬಾಬು ಗೌಡ ಚ್ರಪ್ಪಾಡಿಯವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ತಿಳಿಸಿದ್ದಾರೆ.