ಆಲೆಟ್ಟಿ ಸದಾಶಿವ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವವು ಫೆ.14 ರಿಂದ ಮೊದಲ್ಗೊಂಡು 18 ರ ತನಕ ನಡೆಯಲಿದ್ದು ಆಮಂತ್ರಣ ಪತ್ರ ಬಿಡುಗಡೆಯು ಜ.22 ರಂದು ದೇವಸ್ಥಾನದಲ್ಲಿ ನೆರವೇರಿತು.


ದೇವಳದ ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ ರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ , ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ಸೇ.ಸ.ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ.ಬಡ್ಡಡ್ಕ, ವ್ಯ.ಸ.ಸದಸ್ಯರಾದ ಅಚ್ಚುತ ಮಣಿಯಾಣಿ ಆಲೆಟ್ಟಿ, ಹರಿಪ್ರಸಾದ್ ಗಬ್ಬಲ್ಕಜೆ,ಸತೀಶ್ ಕುಂಭಕೋಡು, ನಳಿನಿ ರೈ ಆಲೆಟ್ಟಿ, ಪಂ.ಸದಸ್ಯ ಶಿವಾನಂದ ರಂಗತ್ತಮಲೆ, ಒತ್ತೆಕೋಲ ಸಮಿತಿ ಅಧ್ಯಕ್ಷ ಸುಧಾಕರ ಆಲೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ಶರತ್, ಲಕ್ಷ್ಮಣ ಪರಿವಾರ, ರಾಮಚಂದ್ರ ಬಾಳೆಹಿತ್ಲು, ಮಹಾಬಲ ರೈ ಆಲೆಟ್ಟಿ, ಬಾಬು ರೈ ಆಲೆಟ್ಟಿ ಹಾಗೂ ಸಮಿತಿಯ ಸದಸ್ಯರು, ಭಜನಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸೇ.ಸ.ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಸ್ವಾಗತಿಸಿ, ಭ.ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ವಂದಿಸಿದರು.