ಅಡಿಕೆ ಎಲೆ‌ ಹಳದಿ ರೋಗ, ಎಲೆ ಚುಕ್ಕೆ ರೋಗದಿಂದ ಬಾಧಿತವಾದ ಸುಳ್ಯದ ಕೃಷಿಕರಿಗೆ ವಿಶೇಷ ಪ್ಯಾಕೇಜ್ ನೀಡಿ

0

ಸುಳ್ಯ ತಾಲೂಕಿನಲ್ಲಿ ಅಡಿಕೆ ಎಲೆ ಹಳದಿ ರೋಗದಿಂದ ಹಾಗೂ ಎಲೆ ಚುಕ್ಕೆ ರೋಗದಿಂದ ಅಡಿಕೆ ಕೃಷಿಕರು ಸಂಕಷ್ಟಕ್ಕೀಡಾಗಿದ್ದಾರೆ. ಈ ಭಾಗದ ಕೃಷಿಕರಿಗೆ ಸರಕಾರ ವಿಶೇಷ ಪ್ಯಾಕೇಜ್ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಶಾಸಕಿ ಕು.ಭಾಗೀರಥಿ ಮುರುಳ್ಯ ಒತ್ತಾಯಿಸಿದ್ದಾರೆ.

ಜ.23ರಂದು‌ ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು‌ ಮಾತನಾಡಿದರು.

ಸುಳ್ಯ ತಾಲೂಕಿನಲ್ಲಿ ಆರೋಗ್ಯ ಇಲಾಖೆಯಲ್ಲಿ ವೈದ್ಯರ ಸಮಸ್ಯೆ ಇದೆ. ಸರ್ವೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದೆ ಇದರಿಂದ ಜಾಗದ ದಾಖಲೆ ಇಲ್ಲದೆ ಮನೆ ಕಟ್ಟಲು ಸಾಧ್ಯವಾಗುತಿಲ್ಲ. ಅರಣ್ಯ ಇಲಾಖೆಯಂಚಿನಲ್ಲಿ ಮನೆ ಮಾಡಿಕೊಂಡವರ ಸಮಸ್ಯೆ ಇತ್ಯಾದಿಗಳನ್ನು ಸರಿಪಡಿಸಬೇಕಾದ ಕೆಲಸ ಆಗಬೇಕಾಗಿದೆ ಎಂದವರು‌ ಹೇಳಿದರು.