ಅರಂತೋಡು: ಗ್ರಾಮೀಣ ಪ್ರದೇಶದ ರಸ್ತೆ ಅಭಿವೃದ್ಧಿಗೆ ವಲಯ ಕಾಂಗ್ರೆಸ್ ಸಮಿತಿಯಿಂದ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಕೆ

0

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಗಾಗಿ ಸುಳ್ಯ ದಲ್ಲಿ ನಡೆದ ಜನತಾ ದರ್ಶನದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗಂಡೂರಾವ್ ರವರಿಗೆ ಅರತೋಡು ವಲಯ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಅಡ್ಕಬಳೆ, ಸುಳ್ಯ ಬ್ಲಾಕ್ ಕಾಂಗ್ರೆಸ್ ಸದಸ್ಯ ತಾಜುದ್ದೀನ್ ಅರಂತೋಡು ಅವರು ಸಚಿವರಿಗೆ ಮನವಿ ನೀಡಿದರು.

ಸಚಿವರು ಮನವಿ ಸ್ವೀಕರಿಸಿದ ಸಚಿವರು ಅಧಿಕಾರಿಗಳಿಗೆ ಪರಿಶೀಲಿಸಲು ನಿರ್ದೇಶಲಾಯಿತು.
ಈ ಸಂದರ್ಭದಲ್ಲಿ ಅರಂತೋಡು ವಲಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜುಬೈರ್ ಅರಂತೋಡು, ಯುವ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕಿರ್ಲಾಯ, ಉಪಸ್ಥಿತರಿದ್ದರು.