ಫೆ.1-2: ದಾಸನಕಜೆ ಕುಂಟಿಕಾನ ತರವಾಡು ದೈವಸ್ಥಾನದಲ್ಲಿ ಶ್ರೀ ದೈವಗಳ ಧರ್ಮ ನಡಾವಳಿ

0

ಅಮರಮುಡ್ನೂರು ಗ್ರಾಮದ ದಾಸನಕಜೆ ಕುಂಟಿಕಾನ ತರವಾಡಿನ ಧರ್ಮ ದೈವ ಶ್ರೀ ಅಣ್ಣಪ್ಪ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ಶ್ರೀ ದೈವಗಳ ಧರ್ಮ ನಡಾವಳಿಯು ಫೆ.1 ಮತ್ತು 2 ರಂದು ನಡೆಯಲಿರುವುದು.

ಫೆ.1 ರಂದು ಪೂರ್ವಾಹ್ನ ಗಣಪತಿ ಹವನವಾಗಿ ಶ್ರೀ ಸತ್ಯನಾರಾಯಣ ದೇವರ ಪೂಜೆಯು ನಡೆದು ಪ್ರಸಾದ ವಿತರಣೆಯಾಗಿ ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ.
ಅಪರಾಹ್ನ ಗಂಟೆ 3.20 ರಿಂದ ಶ್ರೀ ದೈವಗಳ ಭಂಡಾರ ತೆಗೆದು ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.
ಮರುದಿನ ಬೆಳಗ್ಗೆ ಧರ್ಮ ದೈವ ಶ್ರೀ ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವವು ನಡೆದು ಮಧ್ಯಾಹ್ನ
ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯು ನಡೆಯಲಿರುವುದಾಗಿ ಕುಟುಂಬದ ತರವಾಡು ದೈವಸ್ಥಾನದ ಅಧ್ಯಕ್ಷರು, ಮಾಜಿ ಸಚಿವರಾದ ಎಸ್.ಅಂಗಾರ ರವರು ತಿಳಿಸಿರುತ್ತಾರೆ.