ಜಾನಪದ ಪರಿಷತ್ತು ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಜಯರಾಮ ಶೆಟ್ಟಿ ಕೆ.ಎನ್.

0

ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ಜಾನಪದ ಪರಿಷತ್ತು ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಜಯರಾಮ ಶೆಟ್ಟಿ ಕೆ. ಎನ್. ಆಯ್ಕೆಯಾಗಿದ್ದಾರೆ.ಜಯರಾಮ ಶೆಟ್ಟಿಯವರು ದುಗ್ಗಲಡ್ಕದ ಮಿತ್ರ ಯುವಕ ಮಂಡಳಿ ಕೊಯಿಕುಳಿ ಇದರ ಅಧ್ಯಕ್ಷರಾಗಿ, ಕಾರ್ಯಕ್ರಮ ಸಂಘಟಕರಾಗಿ ಕೆಲಸ ನಿರ್ವಹಿಸಿದ್ದಾರೆ. ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಜಾನಪದ, ಸಂಸ್ಕೃತಿ, ಕಲೆ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಮತ್ತು ಜಿಲ್ಲಾ ಘಟಕದಿಂದ ನಡೆಯುವ ಕಾರ್ಯಕ್ರಮಗಳಲ್ಲಿ ಸಹಕರಿಸುವುದು ತಾಲೂಕು ಘಟಕದ ಕಾರ್ಯವಾಗಿದೆ.