ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಸಂಪಾಜೆ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಸಂಪಾಜೆ ಲಯನ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 75ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಶಂಕರ ನಾರಾಯಣ ಭಟ್ ಅವರು ದ್ವಜಾರೋಹಣ ಮಾಡಿ, ಗಣರಾಜ್ಯೋತ್ಸವದ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷ ಯು. ಬಿ. ಚಕ್ರಪಾಣಿ, ಸಂಸ್ಥೆಯ ನಿರ್ದೇಶಕ ಹಾಗೂ ದ. ಕ. ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್‌.ಕೆ. ಮಹಮ್ಮದ್ ಹನೀಫ್, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಯೋಗೇಶ್ವರ ಸೇರಿದಂತೆ ಕ್ಲಬ್ ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಲೋಕ್ಯಾ ನಾಯ್ಕ್, ಬಿ. ಸ್ವಾಗತಿಸಿ, ಮುಖ್ಯಶಿಕ್ಷಕ ಐತ್ತಪ್ಪ ಅವರು ವಂದಿಸಿದರು.
ಸಂಸ್ಥೆಯ ಎಲ್ಲಾ ಬೋಧಕ-ಬೋಧಕೇತರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.