ಕೆವಿಜಿ ಸಮೂಹ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕೆವಿಜಿ ಸಮೂಹ ಸಂಸ್ಥೆಗಳಾದ ಕೆ.ವಿ.ಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಅಮರ ಜ್ಯೋತಿ ಪಿಯು ಕಾಲೇಜು, ಕೆ.ವಿ.ಜಿ ಐಟಿಐ ಇವುಗಳ ಸಹಯೋಗದೊಂದಿಗೆ 75ನೇ ವರ್ಷದ ಗಣರಾಜ್ಯೋತ್ಸವವನ್ನು ಅರಿಸಲಾಯಿತು. ಕೆ.ವಿ.ಜಿ ಸಮೂಹ ಸಂಸ್ಥೆ ಕಮಿಟಿ ‘ಬಿ’ ಇದರ ಸಿ.ಇ.ಓ ಉಜ್ವಲ್ ಊರಬೈಲು ಧ್ವಜರೋಹಣ ನೆರವೇರಿಸಿ ಭಾರತ ಸಂವಿಧಾನದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಇವುಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.

ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರರರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯೋಪಾಧ್ಯಾಯರು, ಸಹ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವರ್ಗದವರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಂಟನೇ ತರಗತಿಯ ವಿದ್ಯಾರ್ಥಿನಿ ಮನ್ವಿತಳ ಕಾರ್ಯಕ್ರಮ ನಿರೂಪಣೆಯ ಜೊತೆ ಅಮರಜ್ಯೋತಿ ಪಿ. ಯು. ಕಾಲೇಜು ಹಾಗೂ ಕೆವಿಜಿ ಐಪಿಎಸ್ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.


ಶಾಲಾ ಸಂಚಾಲಕರಾದ ಡಾ. ರೇಣುಕಾಪ್ರಸಾದ್ ಕೆ. ವಿ. ಹಾಗೂ ಡಾ. ಜ್ಯೋತಿ ಆರ್. ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಂಟನೇ ತರಗತಿಯ ವಿದ್ಯಾರ್ಥಿ ಶ್ರದ್ಧಾ ಪೈ ವಂದಿಸಿದರು.