ಮುರುಳ್ಯ : ಗಣರಾಜ್ಯ ದಿನಾಚರಣೆ ಮತ್ತು ಪ್ರತಿಭಾ ದಿನೋತ್ಸವ, ಸನ್ಮಾನ ಕಾರ್ಯಕ್ರಮ

0

ಮುರುಳ್ಯ ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯ ದಿನಾಚರಣೆ ಮತ್ತು ಪ್ರತಿಭಾ ದಿನೋತ್ಸವ ಜ.26 ರಂದು ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಅವಿನಾಶ್ ಡಿ. ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಂದ ವಿವಿಧ ರೀತಿಯ ಕವಾಯತುಗಳು ನಡೆಯಿತು.


ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವಿನಾಶ್ ದೇವರಮಜಲು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಶಶಿಕಲಾ ಶಾಲಾ ವರದಿ ವಾಚಿಸಿದರು. ಮುರುಳ್ಯ ಪಂಚಾಯತ್ ಸದಸ್ಯ ಕರುಣಾಕರ ಹುದೇರಿ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುರುಳ್ಯ ಇದರ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ರೈ ಕಾರ್ಯಕ್ರಮವನ್ನು ಉದ್ಘಾಟಿಸಿdaru. ಸುದೇಶ್ ರೈ ಅಲೆಕ್ಕಾಡಿ ಮುಖ್ಯ ಅತಿಥಿಯಾಗಿದ್ದರು.


ಶಾಲೆಯನ್ನು ದತ್ತು ತೆಗೆದುಕೊಂಡಿರುವ ಯತೀಶ್ ಪಿ. ಮಧುನಿವಾಸ ಪಲ್ಲತಡ್ಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬಳಿಕ ದತ್ತಿನಿಧಿಯ ನಗದು ಹಣವನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು ಮತ್ತು ವಿವಿಧ ಆಟೋಟ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಕ್ಕಳು, ಹಿರಿಯರು, ವಿದ್ಯಾರ್ಥಿಗಳಿಗೆ , ಪೋಷಕರಿಗೆ ಸಾರ್ವಜನಿಕರಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಕೆ. ನೂಜಾಡಿ ಸ್ವಾಗತಿಸಿ, ಉಪಾಧ್ಯಕ್ಷೆ ಶ್ರೀಮತಿ ಹರ್ಷಿತ ವಂದಿಸಿದರು. ಶಿಕ್ಷಕಿಯರಾದ ಶ್ರೀಮತಿ ನಳಿನಾಕ್ಷಿ ಮತ್ತು ಶ್ರೀಮತಿ ಮಿಥುನಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು, ಮಕ್ಕಳ ಪೋಷಕರು, ಮಕ್ಕಳು ಭಾಗವಹಿಸಿದ್ದರು.


ಅಂಗನವಾಡಿ ಶಾಲಾ ಮಕ್ಕಳಿಂದ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.