ಮಂಡೆಕೋಲಿನಲ್ಲಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜಿನ ರಾ.ಸೇ.ಯೋ. ವಾರ್ಷಿಕ ಶಿಬಿರ

0

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಮಂಡೆಕೋಲಿನಲ್ಲಿ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ಜ. 29ರಂದು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಸಹಕಾರ ಸದನದಲ್ಲಿ ನಡೆಯಿತು.

ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಧ್ವಜಾರೋಹಣ ಮಾಡುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಡೆಕೋಲು ಗ್ರಾ.ಪಂ. ಅಧ್ಯಕ್ಷ ಕುಶಲ ಉದ್ದಂತಡ್ಕ, ಸದಸ್ಯರಾದ ಶ್ರೀಮತಿ ವಿನುತ ಪಾತಿಕಲ್ಲು, ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ಇದರ ಅಧ್ಯಕ್ಷರಾದ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ ಡಿ ವಿ, ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಯಂ‌, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ. ಎ., ವಿಧ್ಯಾರ್ಥಿ ಸಂಘದ ಅಧ್ಯಕ್ಷ ಆರ್ಥಿಕ್ ಕೆ. ಎಸ್., ಕಾರ್ಯದರ್ಶಿಯಾದ ಕು. ಶ್ರೀಜ ರೈ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಭಿರಾರ್ಥಿಗಳಾದ ಕು. ಅಶ್ವಿನಿ ಮತ್ತು ಕು.ರುಚಿತ ಇವರು ಪ್ರಾರ್ಥಿಸಿ, ಕು. ಲಕ್ಷ್ಮೀಶ್ರೀ ಸ್ವಾಗತಿಸಿ, ಶಶಾಂಕ್ ಕೊಯಿಲ ವಂದಿಸಿದರು. ಕು. ಲತಾಶ್ರೀ ಹಾಗೂ ಕು. ಸುಮಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು.
ಎನ್‌.ಎಸ್. ಎಸ್ ಶಿಬಿರವು ಜ. 29ರಿಂದ ಫೆ. 4ರ ತನಕ ಜರಗಲಿದೆ. ಶಿಬಿರದಲ್ಲಿ ಗ್ರಾಮದ ವಿವಿಧ ಶಾಲೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಹಾಗೂ ಆರೋಗ್ಯ ಸಮೀಕ್ಷೆಯನ್ನು ನಡೆಸಲಾಗುವುದು.