ಫೆ.10 ರಂದು ಕೊಲ್ಲಮೊಗ್ರದಲ್ಲಿ ನಡೆಯುವ ಪತ್ರಕರ್ತರ ಗ್ರಾಮವಾಸ್ತವ್ಯಕ್ಕೆ ಪೂರ್ಣ ಸಹಕಾರ : ಎ.ಸಿ. ಭರವಸೆ

0

ಫೆಬ್ರವರಿ 10 ರಂದು ಕೊಲ್ಲಮೊಗ್ರದಲ್ಲಿ ನಡೆಯುವ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಪುತ್ತೂರು ಎ.ಸಿ. ಜುಬಿನ್ ಮಹಾಪಾತ್ರ ಭರವಸೆ ನೀಡಿದ್ದಾರೆ.
ಇಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಸಲಾದ ಅಧಿಕಾರಿಗಳ ಸಭೆಯಲ್ಲಿ ಅವರು ಈ ಮಾತು ಹೇಳಿದರು.


ತಹಶೀಲ್ದಾರ್ ಜಿ ಮಂಜುನಾಥ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾದ ನಾಯಕ್ ಇಂದಾಜೆಯವರ ಉಪಸ್ಥಿತಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಕೂಡ ಗ್ರಾಮವಾಸ್ತವ್ಯದ ಯಶಸ್ಸಿಗೆ ಸಹಕರಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಪುಷ್ಪರಾಜ ಶೆಟ್ಟಿ, ಕಟ್ಟ ಭಾಸ್ಕರ ರೈ, ಗಂಗಾಧರ ಕಲ್ಲಪಳ್ಳಿ, ದಯಾನಂದ ಕಲ್ನಾರ್ , ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.