ಸಂಪಾಜೆ ಸಹಕಾರಿ ಸಂಘದ ವತಿಯಿಂದ ಮರಣನಿಧಿ ಹಸ್ತಾಂತರ

0

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿದ್ದು, ಇತ್ತೀಚೆಗೆ ಮೃತಪಟ್ಟ ಗಂಗಾಧರ ಡಿ. ಎ. ಅವರ ಮನೆಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹದಿನೈದು ಸಾವಿರವನ್ನು ಅವರ ಮನೆಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಆನಂದ ಪಿ ಎಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರು ಹಾಜರಿದ್ದರು.