ಕಾಂಚೋಡು ಜಾತ್ರೋತ್ಸವ : ಹಸಿರು ಕಾಣಿಕೆ ಮೆರವಣಿಗೆ

0

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ. 11ರಿಂದ 15ರ ತನಕ ಜರಗಲಿದ್ದು, ಫೆ. 11ರಂದು ಸಂಜೆ ಹಸಿರು ವಾಣಿ ಮೆರವಣಿಗೆ ನಡೆಯಿತು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು ದೇವತಾ ಪ್ರಾರ್ಥನೆ ನೆರವೇರಿಸಿ ಕಾಯಿ ಒಡೆದು ಮೆರವಣಿಗೆಗೆ ಚಾಲನೆ ನೀಡಿದರು.
ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಜಾತ್ರೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.