ರಾಜ್ಯ ಸರಕಾರದ ಸುತ್ತೋಲೆಯಂತೆ ತಾಲೂಕು ಕಚೇರಿಯಲ್ಲಿ ವಿಶ್ವಗುರು ಬಸವಣ್ಣರ ಭಾವಚಿತ್ರ ಅನಾವರಣ

0

12ನೇ ಶತಮಾನದ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರನ್ನು ರಾಜ್ಯ ಸರಕಾರ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಸರಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಅನಾವರಣ ಮಾಡುವಂತೆ ಸುತ್ತೋಲೆ ಹೊರಡಿಸಿತ್ತು.
ಅದರಂತೆ ಇಂದು ಸುಳ್ಯ ತಾಲೂಕು ಕಚೇರಿಯಲ್ಲಿ ಭಾವಚಿತ್ರ ಅನಾವರಣ ಮಾಡಲಾಯಿತು.
ತಹಶೀಲ್ದಾರ್ ಜಿ.ಮಂಜುನಾಥ್, ಉಪತಹಶೀಲ್ದಾರ್ ಮಂಜುನಾಥ್, ಕಂದಾಯ ನಿರೀಕ್ಷಕರಾದ ಅವಿನ್ ರಂಗತಮಲೆ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.