ಹರಿಹರೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಪನ್ನ

0

ವೈಭವದಿಂದ ನಡೆದ ದೇವರ ಬಲಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ, ನೇಮೋತ್ಸವ

ಹರಿಹರ ಪಲ್ಲತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಂದು ಆರಂಭವಾಗಿ ಫೆ.22 ರವರೆಗೆ ನಡೆಯಿತು. ಫೆ.20 ರಂದು  ಹಸಿರು ಕಾಣಿಕೆ ಸಂಮರ್ಪಣೆ ನಡೆದಿದ್ದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.  ಸಾಯಂಕಾಲ ತಂತ್ರಿಗಳ ಆಗಮನವಾಗಿ ವಿವಿಧ ಧಾರ್ಮಿಕ ಕಾರ್ಯ ಪೂರೈಸಲಾಯಿತು. ರಾತ್ರಿ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.


ಫೆ. 21ರಂದು ಬೆಳಿಗ್ಗೆ ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆದು, ಸಾಯಂಕಾಲ ದೀಪಾರಾಧನೆ, ಚೆಂಡೆವಾದನ, ರಾತ್ರಿ ಮಹಾಪೂಜೆ, ರಾತ್ರಿ ದೇವರಬಲಿ ಉತ್ಸವ ಹೊರಟು, bವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ನಡೆಯಿತು.
ಫೆ. 22ರಂದು ಬೆಳಗ್ಗೆಯಿಂದ ಸಾಯಂಕಾಲ ತನಕ ಉಳ್ಳಾಗುಳು ಮತ್ತು ಪರಿವಾರ ದೈವಗಳ ನೇಮೋತ್ಸವ ನಡೆಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಸದಸ್ಯರಾದ ಚಂದ್ರಹಾಸ ಶಿವಾಲ, ಶರತ್ ಭಾಗವತ್, ಭವಾನಿಶಂಕರ ಪಿ ಪೈಲಾಜೆ, ಆನಂದ ಕೆರೆಕ್ಕೋಡಿ, ಚಂದ್ರಶೇಖರ ಕೆ.ಕೆ, ಶ್ರೀಮತಿ ರೇಶ್ಮಾ ಕಟ್ಟೆಮನೆ, ಶ್ರೀಮತಿ ಜ್ಯೋತಿ ಕೆ.ಎಲ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಕಿರಿಭಾಗ, ಜನಾರ್ದನ ಗುಂಡಿಹಿತ್ಲು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರ ಭಕ್ತರು ಆದಿಯಾಗಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ: ಫೆ.20 ರ ಸಂಜೆ ಅಂಗನವಾಡಿ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಬಳಿಕ ಅಮರ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ಯೋಗ ಪ್ರದರ್ಶನ ನಡೆಯಿತು. ಬಳಿಕ ಸ.ಕಿ.ಪ್ರಾ.ಶಾಲೆ ಕರಂಗಲ್ಲು ಇವರಿಂದ ಏಕಾದಶಿ ದೇವಿ ಮಹಾತ್ಮೆ ಕಾರ್ಯಕ್ರಮ ನಡೆಯಿತು. ರಾತ್ರಿ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆಯಿತು. ಅಕ್ಷರಗಾನ ಸುಧೆ ತಂಡ ಕುಕ್ಕೆ ಸುಬ್ರಹ್ಮಣ್ಯ ಇವರಿಂದ ಸಂಗೀತ ರಸಮಂಜರಿ ನಡೆಯಿತು. ಆ ಬಳಿಕ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘ ಕಾಸರಗೋಡು ಇವರಿಂದ “ನರಕಸುರ ವಧೆ – ಗರುಡ ಗರ್ವಭಂಗ ಯಕ್ಷಗಾನ ಗೊಂಬೆಯಾಟ ನಡೆಯಿತು. ಬಳಿಕ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಫೆ.21 ರ ಬೆಳಗ್ಗೆ 6.00 ರಿಂದ ಸಂಜೆ 6.00 ಗಂಟೆ ವರೆಗೆ ಅರ್ಧ ಏಕಾಹ ಭಜನೆ ನಡೆಯಿತು. ಅದೇ ದಿನ ಸಂಜೆ ಬಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸುಳ್ಯ ಇವರಿಂದ ಶ್ರೀ ಸತ್ಯನಾರಾಯಣ ಸತ್ಯಕಥೆ ರೂಪಕ ನಡೆಯಿತು.

ಧಾರ್ಮಿಕ ಸಭೆ
ಫೆ.20 ರಂದು ಧಾರ್ಮಿಕ ಸಭೆ ನಡೆದಿದ್ದು ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ವಹಿಸಿದ್ದರು. ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎ.ಟಿ ಕುಸುಮಾಧರ ಧಾರ್ಮಿಕ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಲಯಾಳದಲ್ಲಿ ಹರಿಹರೇಶ್ವರ ದೇವಾಲಯಕ್ಕೆ ಹೋಗುವ ದ್ವಾರದ ಕೊಡುಗೆಯಾಗಿ ನೀಡಿದ ಹೇಮಕರ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.