ಇಂದಿನಿಂದ ಮೂರು ದಿನಗಳ ಕಾಲ ಸುಳ್ಯ ರಾಮ ಮಂದಿರದ ಬ್ರಹ್ಮಕಲಶೋತ್ಸವ

0

ಸುಳ್ಯ ನಗರದ ಶ್ರೀ ರಾಮ ಪೇಟೆಯ ಶ್ರೀ ರಾಮ ಮಂದಿರದ ಬ್ರಹ್ಮಕಲಶೋತ್ಸವವು ಇಂದಿನಿಂದ ಮೊದಲ್ಗೊಂಡು ಮೂರು ದಿನಗಳ ಕಾಲ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.


ಇಂದು ಪ್ರಾತ:ಕಾಲ ಗಣಪತಿ ಹವನವಾಗಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆದು ಚೆನ್ನಕೇಶವ ದೇವಸ್ಥಾನದ ಎದುರಿನಿಂದ ಹಸಿರುವಾಣಿ ಮೆರವಣಿಗೆ ಸಾಗಿ ಬರಲಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯಾಗಿ
ದಾಸ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ಬಳಗದವರಿಂದ ದಾಸ ಮಂಜರಿ ಭಕ್ತಿ ಗಾನ ಕಾರ್ಯಕ್ರಮ ನಡೆಯಲಿದೆ.