ರಾಜ್ಯ ಮುಕ್ತ ವಿ.ವಿ. ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ಡಾ. ಗೀತಾ ಗುಡ್ಡೆಮನೆ ನಾಮ ನಿರ್ದೇಶನ

0

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ರಾಷ್ಟ್ರೀಯ ಕ್ರೀಡಾಪಟು, ಸುಳ್ಯದವರಾದ ಡಾ. ಗೀತಾ ಗುಡ್ಡೆಮನೆ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ.

ಗೀತಾ ಅವರ ಅಕಾಡೆಮಿಕ್ ಸಾಧನೆ ಮತ್ತು ಕ್ರೀಡಾ ಸಾಧನೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ.

ಕಂದಡ್ಕದ ಆನಂದ ಗೌಡ ಮತ್ತು ಶ್ರೀಮತಿ ಜಯ ದಂಪತಿಯ ಪುತ್ರಿಯಾದ ಗೀತಾ ಅವರು ಪ್ರಸ್ತುತ ಮೈಸೂರು ವಿಶ್ವ ವಿದ್ಯಾಲಯದ ಪಿ.ಎಚ್.ಡಿ. ಸ್ಕಾಲರ್ ಆಗಿದ್ದಾರೆ.

ಈ ಹಿಂದೆ ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಗೀತಾ ಅವರು ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಾಗಿದ್ದು, ರಾಜ್ಯ ಮಹಿಳಾ ಕಬಡ್ಡಿ ತಂಡದಲ್ಲಿ ಆಡಿದ್ದರಲ್ಲದೆ, ಮಹಿಳಾ ಕಬಡ್ಡಿ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಮೈಸೂರು ಹಾಗೂ ಮಂಗಳೂರು ವಿ.ವಿ.ಪರವಾಗಿಯೂ ಆಡಿದ್ದರು.