ತಾಲೂಕು ಸ್ವೀಪ್ ಸಮಿತಿಯಿಂದ ತಾ.ಪಂ. ಸಭಾಂಗಣದಲ್ಲಿ ಸಾರ್ವತ್ರಿಕ ಚುನಾವಣೆ ಕುರಿತು ತರಬೇತಿ

0

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಶಾಲಾ ಕಾಲೇಜುಗಳ ಇ.ಎಲ್.ಸಿ. ಸಂಚಾಲಕರಿಗೆ, ಚುನಾವಣಾ ಪ್ರಚಾರ ರಾಯಭಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಒಂದು ದಿನದ ಸ್ವೀಪ್ ತರಬೇತಿ ಕಾರ್ಯಕ್ರಮವನ್ನು ಫೆ.28 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶಿಕ್ಷಕ ಹರಿಪ್ರಸಾದ್ ರವರು ಚುನಾವಣಾ ಗೀತೆಯನ್ನು ಹಾಡುವುದರ ಮೂಲಕ ಆರಂಭಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್ ಮಂಜುನಾಥ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ರವರು ಚುನಾವಣಾ ಪ್ರಚಾರದ ಅವಶ್ಯಕತೆಯನ್ನು ಮತ್ತು ಅದರ ಮಹತ್ವವನ್ನು ತಿಳಿಸಿದರು.


ಜಿಲ್ಲಾ ಮಟ್ಟದ ತರಬೇತುದಾರರಾದ ಸುಳ್ಯ ಸ. ಪ್ರ. ದ. ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶಿವಾನಂದರು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಅನ್ನಪೂರ್ಣೇಶ್ವರಿ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯ ಮೇಲೆ ಉಪ ತಹಶೀಲ್ದಾರ್ ಚಂದ್ರಕಾಂತ್ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾ ಕುಮಾರಿ ಬಿ.ಎಸ್. ಉಪಸ್ಥಿತರಿದ್ದರು. ತಾಲೂಕು ಮಟ್ಟದ ತರಬೇತುದಾರ ಹಾಗೂ ಶಾರದಾ ಪಿ.ಯು. ಕಾಲೇಜು ಉಪನ್ಯಾಸಕರಾದ ದಾಮೋದರ ರವರು ಕಾರ್ಯಕ್ರಮ ನಿರೂಪಿಸಿದರು.
ಇತರೆ ತರಬೇತುದಾರರಾದ ಡಾ.
ಜಯಶ್ರೀ ಕೆ., ಆನಂದ ಕೆ.ಎಸ್., ವಸಂತ ನಾಯಕ್ ಡಿ., ಪೂರ್ಣಿಮಾ ಟಿ., ಅನ್ನಪೂರ್ಣ ಹಾಜರಿದ್ದರು.