ಪಿಲಿಕಜೆ ಧರ್ಮಶಾಸ್ತ್ರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ- ಭಜನಾ ಕಾರ್ಯಕ್ರಮ

0

ಅಮರಮುಡ್ನೂರು ಗ್ರಾಮದ ಪಿಲಿಕಜೆ ಶ್ರೀ ಧರ್ಮಶಾಸ್ತ್ರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಫೆ.24 ರಂದು ಜರುಗಿತು.
ಪ್ರಾತ:ಕಾಲ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಂಜೆ ಸೂರ್ಯಾಸ್ತದ ವೇಳೆಗೆ ದೀಪ ವಿಸರ್ಜನೆಯಾಗಿ ಮಹಾ ಮಂಗಳಾರತಿಯೊಂದಿಗೆ ಸಮಾಪನಗೊಂಡಿತು.


ತಾಲೂಕಿನ ವಿವಿಧ ಭಜನಾ ತಂಡದವರಿಂದ ಭಜನಾ ಸಂಕೀರ್ತನೆ ಹಾಗೂ ಆಕರ್ಷಕ ಕುಣಿತ ಭಜನೆಯು ನಡೆಯಿತು.
ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿಯವರು ಆಗಮಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ರಾತ್ರಿ ಯಕ್ಷಗಾನ ಬಯಲಾಟ ಪ್ರದರ್ಶನವಾಯಿತು. ಆಗಮಿಸಿದ ಭಕ್ತಾದಿಗಳಿಗೆ ಮಧ್ಯಾಹ್ನ ಹಾಗೂ ರಾತ್ರಿ ಸಾರ್ವಜನಿಕ ಅನ್ನ ಸಂತರ್ಪಣೆ ವಿತರಣೆಯಾಯಿತು. ಮಂದಿರದ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಸರ್ವರನ್ನೂ ಸ್ವಾಗತಿಸಿದರು.