ಅರಂಬೂರು: ಇಡ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ನಿರ್ಮಾಣಕ್ಕೆ ಸರಕಾರದಿಂದ 10 ಲಕ್ಷ ರೂಪಾಯಿ ಮಂಜೂರು

0

ಅರಂಬೂರು ಇಡ್ಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಸರಕಾರದಿಂದ ಹತ್ತು ಲಕ್ಷ ರೂಪಾಯಿಗಳು ಮಂಜೂರಾಗಿದೆ. ಈ ಅನುದಾನ ತರಿಸುವಲ್ಲಿ ಕೆಪಿಸಿಸಿ ಸಂಯೋಜಕ ಎಸ್ ಸಂಶುದ್ದೀನ್ ಅರಂಬೂರು ಸಂಪೂರ್ಣ ಸಹಕರಿಸಿದ್ದಾರೆ.

ಕರ್ನಾಟಕ ಸರಕಾರದ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ರವರು ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಾಯಕರ ಮತ್ತು ಕಾರ್ಯಕರ್ತರ ಸಭೆಗೆ ಭಾಗವಹಿಸಿದ್ದ ಸಂದರ್ಭ ಸಚಿವರನ್ನು ಭೇಟಿ ಮಾಡಿದ ಅವರು ಅರಂಬೂರು ಸಮೀಪದ ಇಡ್ಡ್ಯಡ್ಕ ಸರಕಾರಿ ಪ್ರಾರ್ಥಮಿಕ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ರೂ 10 ಲಕ್ಷ ಅನುಧಾನ ಮತ್ತು ಸುಳ್ಯದಲ್ಲಿ ಅನುಷ್ಠಾನಗೊಳ್ಳಲಿರುವ ತಾಲೂಕು ಕ್ರೀಡಾಂಗಣಕ್ಕೆ ಅತೀ ಶೀಘ್ರ ಹಣವನ್ನು ಬಿಡುಗಡೆ ಮಾಡಿ ಕೆಲಸವನ್ನು ಪೊರೈಸುವ ಬಗ್ಗೆ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿರುವ ಸಚಿವರು ಶಾಲೆಗೆ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ.