ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿ ಸಂಘ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರೆಶರ್‍ಸ್‌ಡೇ ಆಚರಣೆ

0

 ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ೨೦೨೩-೨೪ರ ಸಾಲಿನ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಅಧ್ವಯ ಮತ್ತು ವಿದ್ಯಾರ್ಥಿ ಸಂಘ ಮಾನಸ ಉದ್ಘಾಟಣಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ ದೀಪಕ್ ಕುತ್ತಮೊಟ್ಟೆಯವರು ವಿದ್ಯಾಭ್ಯಾಸದ ಮಹತ್ವ ಮತ್ತು ಆಧುನಿಕತೆಯಲ್ಲಿ ವಿದ್ಯಾರ್ಥಿಗಳ ಪ್ರಭಾವದ ಬಗ್ಗೆ ತಿಳಿಸಿದರು. ಗೌರವ ಅತಿಥಿ ವಿಟಿಯುನ ಎಕ್ಸೆಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಯವರು ಭವಿಷ್ಯದಲ್ಲಿ ಜ್ಞಾನದ ಮೌಲ್ಯವು ವೃದ್ಧಿಯಾಗುವುದರ ಜೊತೆಯಲ್ಲಿ ಉದ್ಯೋಗ ಅವಕಾಶಗಳ ಬಗ್ಗೆ ಮಾತನಾಡಿದರು. 


ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ಶ್ರೀಧರ ಕೆ. ಹಾಗೂ ಎಂ.ಬಿ.ಎ. ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ. ವಿದ್ಯಾರ್ಥಿ ಸಲಹೆಗಾರರಾದ ಪ್ರೊ. ಇಮ್ಯಾಕ್ಯುಲೇಟ್ ಮೇರಿ, ಕೋಶಾಧಿಕಾರಿ ಪ್ರೊ. ಮನೋಹರ ಎ.ಎನ್. ಸಂಘದ ನೂತನ ಉಪಾಧ್ಯಕ್ಷೆ ಗಾಯತ್ರಿ ನಂಬಿಯಾರ್ ಮತ್ತು ಕಾರ್ಯದರ್ಶಿ ಯಶಸ್ ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು ಮತ್ತು ಮನೋರಂಜನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. 

ಕಾರ್ಯಕ್ರಮವನ್ನು ಗಾಯತ್ರಿ ನಂಬಿಯಾರ್ ಸ್ವಾಗತಿಸಿ, ಕಾರ್ಯದರ್ಶಿ ಯಶಸ್ ವಾರ್ಷಿಕ ವರದಿಯನ್ನು ಮಂಡಿಸಿದರು. ಹಾಗು ಚೈತನ್ಯ ವಂದಿಸಿದರು. ಶಿಫಾ ಎಂ.ಎ. ಮತ್ತು ಶಿಫಾ ಎ. ಕಾರ್ಯಕ್ರಮವನ್ನು ನಿರೂಪಿಸಿದರು.