ಮಾ. 14: ಕೊಡಿಯಾಲ ವಿಶ್ವಕರ್ಮ ಭಜನಾ ಮಂಡಳಿಯ ವಾರ್ಷಿಕೋತ್ಸವ ವಿಶ್ವಕರ್ಮ ಪೂಜೆ

0

ಶ್ರೀ ವಿಶ್ವಕರ್ಮ ಭಜನಾ ಮಂಡಳಿ ನಿಡ್ಮಾರು, ಕೊಡಿಯಾಲ ಇದರ 22ನೇ ವಾರ್ಷಿಕೋತ್ಸವ ಮತ್ತು ಶ್ರೀ ವಿಶ್ವಕರ್ಮ ಪೂಜೆ ಮಾ. 14ರಂದು ಕೊಡಿಯಾಲ ಗ್ರಾಮದ ನಿಡ್ಮಾರು ಶ್ರೀ ವಿಶ್ವಕರ್ಮ ಭಜನಾ ಮಂಡಳಿಯ ನಿವೇಶನದಲ್ಲಿ ನಡೆಯಲಿದೆ. ಬೆಳಿಗ್ಗೆ 8.00ಕ್ಕೆ ವಿಶ್ವಕರ್ಮ ಪೂಜೆ ಆರಂಭಗೊಳ್ಳಲಿದೆ.

ಪೂರ್ವಾಹ್ನ 11.00ರಿಂದ ಮಂಡಳಿಯ ಅಧ್ಯಕ್ಷ ಕೆ.ಎಚ್. ಮಧುಚಂದ್ರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ದೀಪ ಬೆಳಗಿಸಲಿದ್ದಾರೆ.

ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕರಾದ ರಾಮಪ್ರಸಾದ ಕಾಂಚೋಡು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಯುವ ಉದ್ಯಮಿ ಮಿಥುನ್‌ ಶೆಣೈ ಬೆಳ್ಳಾರೆ, ನಿವೃತ್ತ ತಹಶಿಲ್ದಾರ್ ಎಸ್. ರಾಘವೇಂದ್ರ, ಕೊಡಿಯಾಲದ ನಮ್ಮೂರ ನಮ್ಮ ಕನಸು ಜನಸೇವಾ ಟ್ರಸ್ಟಿನ ಅಧ್ಯಕ್ಷ ಸುಬ್ರಹ್ಮಣ್ಯ ಕೆ.ಎಂ, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ನಮಿತಾ ಪಿ. ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಟಿ ವೈದ್ಯ ದಿನೇಶ್ ಕುಮಾರ್ ಮಾಳರಿಗೆ ಸನ್ಮಾನ ಕಾರ್ಯಕ್ರಮ ಈ ಸಂದರ್ಭದಲ್ಲಿ ನಡೆಯಲಿದೆ. ಸ.ಹಿ.ಪ್ರಾ. ಶಾಲೆ ನೆಟ್ಟಾರು ಮತ್ತು ಸ.ಹಿ.ಪ್ರಾ. ಶಾಲೆ ದರ್ಖಾಸ್ತು ಇಲ್ಲಿನ 1ರಿಂದ 7ನೇ ತರಗತಿವರೆಗಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಈ ಸಂದರ್ಭದಲ್ಲಿ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.00ರಿಂದ 12.00ರ ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8.00 ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಮಂಡಳಿಯ ಅಧ್ಯಕ್ಷರಾಗಿ ಕೆ.ಎಚ್. ಮಧುಚಂದ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಎಂ.ಆರ್, ಉಪಾಧ್ಯಕ್ಷರಾಗಿ ದಿನೇಶ್ ಬಾಚೋಡಿ, ಕಾರ್ಯದರ್ಶಿಯಾಗಿ ಪ್ರವೀಣ್ ಕಾಣಿಯೂರು ಮತ್ತು ಕೋಶಾಧಿಕಾರಿಯಾಗಿ ಶೇಷಪ್ಪ ಆಚಾರ್ಯ ನಿಡ್ಮಾರು ಸೇವೆ ಸಲ್ಲಿಸುತ್ತಿದ್ದಾರೆ.