ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪರೀಕ್ಷೆಯಲ್ಲಿ ಚೈತ್ರಾ ಎಂ.ಬಿ.ಯವರಿಗೆ 7 ನೇ ರ್‍ಯಾಂಕ್

0

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಎಂಎಸ್ಸಿ 2020-21ರ‌ ಜನವರಿ ಆವೃತ್ತಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಸ್ನಾತಕೋತ್ತರ ಪರೀಕ್ಷೆಯಲ್ಲಿ ಶ್ರೀಮತಿ ಚೈತ್ರ ಎಂ.ಬಿ.ಯವರು 7ನೇ ರ್‍ಯಾಂಕ್ ಪಡೆದಿದ್ದಾರೆ.

ಮಾರ್ಚ್ 3 ರಂದು ಮೈಸೂರಿನ ಮುಕ್ತ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪದವಿ ಪ್ರದಾನ ನಡೆಯಿತು.

ಇವರು ಮಂಡೆಕೋಲು ಗ್ರಾಮದ ಬೊಳುಗಲ್ಲು ಚಂದ್ರಶೇಖರ ಮತ್ತು ಶ್ರೀಮತಿ ಮಹಾದೇವಿ ದಂಪತಿಗಳ ಪುತ್ರಿ. ಬೆಂಗಳೂರಿನ ಹೆಚ್ ಇಎಲ್ ಟೆಕ್ನಾಲಜೀಸ್ ನಲ್ಲಿ ಉದ್ಯೋಗಿಯಾಗಿರುವ ಅಜ್ಜಾವರ ಗ್ರಾಮದ ಮುಳ್ಯ ಅರಂವಿಂದರ ಧರ್ಮಪತ್ನಿ.