ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿಮುಹೂರ್ತ

0

ದ.ಕ. ಸಂಪಾಜೆ ಗ್ರಾಮದ ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಒತ್ತೆಕೋಲ ಉತ್ಸವವು ಮಾ. 28ರಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ದೈವದ ಸಮ್ಮಾನಗಳ ಪೂರ್ವಭಾವಿ ಸಭೆಯು ಮಾ.14ರಂದು ಒತ್ತೆಕೋಲ ಗದ್ದೆಯ ಕಛೇರಿಯಲ್ಲಿ ಜರುಗಿತು.

ಒತ್ತೆಕೋಲ ಉತ್ಸವ ಸಮಿತಿಯ ಅಧ್ಯಕ್ಷ ಜಗದೀಶ್ ರೈ ಸಂಪಾಜೆ ಅವರು ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಜಾರಾಂ ಕೀಲಾರು, ಮೊಕ್ತೇಸರ ಕೆ‌. ಕರುಣಾಕರ, ಕಾರ್ಯದರ್ಶಿ ಕೆ.ವಿ. ಮಂಜುನಾಥ್, ಕೋಶಾಧಿಕಾರಿ ಬಿ.ಆರ್. ಪದ್ಮಯ್ಯ, ಮಾಜಿ ಅಧ್ಯಕ್ಷ ಶ್ರೀಧರ ಮಾದೆಪಾಲು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಸಮಿತಿ ಪದಾಧಿಕಾರಿಗಳು, ಸರ್ವಸದಸ್ಯರು ಸೇರಿದಂತೆ ಹಲವಾರು ಮಂದಿ ಭಕ್ತಾದಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಸೂಕ್ತ ಸಲಹೆ – ಸೂಚನೆಗಳನ್ನು ನೀಡಿದರು.


ಕಾ ಕಾರ್ಯಕ್ರಮದ ಕೊನೆಯಲ್ಲಿ ಕಲ್ಲುಗುಂಡಿ ಒತ್ತೆಕೋಲ ಉತ್ಸವದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳುತ್ತಿದ್ದ ಕವಿತಾ ವೈನ್ಸ್ ಮಾಲಕ ದಿ. ಒ.ಎಂ. ಸುರೇಂದ್ರ ಅವರಿಗೆ ಮೌನಪ್ರಾರ್ಥನೆ ಸಲ್ಲಿಸಲಾಯಿತು.