ಕುಂಚಡ್ಕ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

0

ಆಲೆಟ್ಟಿ ಗ್ರಾಮದ ಕುಂಚಡ್ಕ ಮನೆತನದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.1 ರಂದು ನಡೆಯಲಿದ್ದು ಪೂರ್ವ ಭಾವಿಯಾಗಿ ಕೊಳ್ಳಿ ಮುಹೂರ್ತವು ಇಂದು ನಡೆಯಿತು.

ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ಶ್ರೀ ವಿಷ್ಣುಮೂರ್ತಿ ದೈವದ ಪೂಜಾರಿ ಕೆ.ಎಸ್.ಚೆನ್ನಪ್ಪ ಗೌಡ ರವರ ಹಾಗೂ ಭಾರತೀಯ ತೀಯ ಸಮಾಜ ಬಾಂಧವರ ನೇತೃತ್ವದಲ್ಲಿ ಕೊಳ್ಳಿ ಮುಹೂರ್ತ ನೆರವೇರಿತು.

ಈ ಸಂದರ್ಭದಲ್ಲಿ ಕುಂಚಡ್ಕ ಕುಟುಂಬದ ಯಜಮಾನರು ಮತ್ತು ಒತ್ತೆಕೋಲ ಸಮಿತಿ ಅಧ್ಯಕ್ಷ ಗೋಪಾಲ ಕುಂಚಡ್ಕ ಮತ್ತು ಸದಸ್ಯರು, ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಧನಂಜಯ ಕುಂಚಡ್ಕ, ತೀರ್ಥಕುಮಾರ್ ಕುಂಚಡ್ಕ ಹಾಗೂ ಕುಂಚಡ್ಕ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಭಾರತೀಯ ತೀಯ ಸಮಾಜ ಬಾಂಧವರು ಸಹಕರಿಸಿದರು.