ಕೋಲ್ಚಾರು-ಪೈಂಬೆಚ್ಚಾಲ್-ಅಜ್ಜಾವರ ಸಂಪರ್ಕ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

0

ಆಲೆಟ್ಟಿ ಗ್ರಾಮದ ಕೋಲ್ಚಾರು -ಪೈಂಬೆಚ್ಚಾಲ್ ನೀಲಗಿರಿ ಅಡ್ಕ- ಅಜ್ಜಾವರ ಸಂಪರ್ಕ ರಸ್ತೆಯ ಕಾಮಗಾರಿಗೆ ಮಾಜಿ ಸಚಿವ ಎಸ್. ಅಂಗಾರ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ರವರ ಶಿಫಾರಸ್ಸಿನ ಮೇರೆಗೆ ಸರ್ಕಾರದಿಂದ
ರೂ. 50 ಲಕ್ಷ ಅನುದಾನ ಬಿಡುಗಡೆಯಾಗಿದ್ದು ರಸ್ತೆಯ ಕಾಮಗಾರಿಗೆ ಮಾ.16 ರಂದು ಗುದ್ದಲಿಪೂಜೆಯು ನಡೆಯಿತು.


ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ
ಕು. ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಅನುದಾನ ತರಿಸುವಲ್ಲಿ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಯವರು ಸಹಕರಿಸಿದ್ದರು. ಬಿಜೆಪಿ ಮುಖಂಡ
ಸುಬೋಧ್ ಶೆಟ್ಟಿ ಮೇನಾಲ, ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಚನಿಯ ಕಲ್ತಡ್ಕ, ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ, ಪಂ.ಸದಸ್ಯರಾದ ದಿನೇಶ್ ಕಣಕ್ಕೂರು, ಶಂಕರಿ ಕೊಲ್ಲರಮೂಲೆ, ಗೀತಾ ಕೋಲ್ಚಾರು, ಧರ್ಮಪಾಲ ಕೊಯಿಂಗಾಜೆ, ಕುಸುಮಾವತಿ ಬಿಲ್ಲರಮಜಲು, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ನಿರ್ದೇಶಕ ಸುದರ್ಶನ ಪಾತಿಕಲ್ಲು, ಪಂ.ಮಾಜಿ ಸದಸ್ಯ ಸೀತಾರಾಮ ಕೊಲ್ಲರಮೂಲೆ, ತಾ.ಪಂ.ಮಾಜಿ ಸದಸ್ಯೆ ಪದ್ಮಾವತಿ ಕುಡೆಂಬಿ, ಸೀತಾರಾಮ ಗಟ್ಟಿಗಾರು, ವಿಶ್ವನಾಥ ಕೊಯಿಂಗಾಜೆ, ಪ್ರದೀಪ್ ಕೊಲ್ಲರಮೂಲೆ, ನಿಸಾರ್ ಪೈಂಬೆಚ್ಚಾಲು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.