ದ.ಕ ಜಿಲ್ಲಾ ಅಡಿಕೆ ಬೆಳೆಗಾರರ ಸಂಘ “ಮಾಸ್”‌ ಅಧ್ಯಕ್ಷರಾಗಿ ಸವಣೂರು ಸೀತಾರಾಮ ರೈ ಅವಿರೋಧ ಆಯ್ಕೆ

0

ದ.ಕ ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದ.ಕ ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿದ್ದ ಭಾಸ್ಕರ್‌ ಕೋಟ್ಯಾನ್ ವೈಯಕ್ತಿಕ ಕಾರಣಗಳಿಂದ ಎರಡು ತಿಂಗಳ ಹಿಂದೆ ಅಧ್ಯಕ್ಷ ಪದವಿಗೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಆಯ್ಕೆ ನಡೆದಿದ್ದು, ಸಂಸ್ಥೆಯ ಎಲ್ಲಾ ನಿರ್ದೇಶಕರ ಉಪಸ್ಥಿತಿಯಲ್ಲಿ ಅಧ್ಯಕ್ಷರಾಗಿ‌ ಸವಣೂರು ಸೀತಾರಾಮ ರೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾಧಿಕಾರಿಯಾಗಿದ್ದ ಸಹಕಾರಿ ಇಲಾಖೆಯ ಮಂಗಳೂರಿನ ಸಹಾಯಕ ನಿಬಂಧಕ ವಿಲಾಸ್ ಉಪಸ್ಥಿತಿಯಲ್ಲಿ ಈ ಆಯ್ಕೆ ಮಾಡಲಾಗಿದ್ದು, ಮುಂದಿನ 4 ವರ್ಷಗಳ ಅವಧಿಗೆ ಸವಣೂರು ಸೀತಾರಾಮ ರೈ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಸಮಿತಿಯಲ್ಲಿ ಉಪಾಧ್ಯಕ್ಷರಾಗಿದ್ದ ಸವಣೂರು ಸೀತಾರಾಮ ರೈ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದಾರೆ.ಈ ಹಿಂದೆ 2022ರ ನ.21 ರಂದು ಮಾಸ್‌ಗೆ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದರು.

ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್‌ ಪರವಾಗಿ ನಿರ್ದೇಶಕ ಶಶಿಕುಮಾರ್‌ ರೈ ಬಾಲ್ಯೊಟು, ನಿತ್ಯಾನಂದ ಮುಂಡೋಡಿ ಸೇರಿದಂತೆ ನಿರ್ದೆಶಕರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಮಂಗಳೂರು ಹೊರವಲಯದ ಕೂಳೂರಿನ ಎಪಿಎಂಸಿ ಯಾರ್ಡ್‌ ನಲ್ಲಿ ದ.ಕ ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಆಡಳಿತ ಕಚೇರಿಯನ್ನು ಹೊಂದಿದೆ.