ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

0

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನಕ್ಕೆ ದ.ಕ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ರವರು ಇಂದು ಬೆಳಿಗ್ಗೆ ಭೇಟಿ ನೀಡಿದರು.


ಲೋಕಸಭಾ ಅಭ್ಯರ್ಥಿ ಘೋಷಣೆಯಾಗಿ ಪ್ರಥಮ ಬಾರಿಗೆ ಸುಳ್ಯ ತಾಲೂಕು ಪ್ರವಾಸ ಕೈಕೊಂಡ ಚೌಟರವರು ವಾರ್ಷಿಕ ನೇಮೋತ್ಸವ ನಡೆಯುತ್ತಿದ್ದ ದೈವಸ್ಥಾನಕ್ಕೆ ಭೇಟಿ ನೀಡಿ ದೈವದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ
ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ಎ.ವಿ.ತೀರ್ಥರಾಮ, ಚಂದ್ರ ಕೋಲ್ಚಾರ್,


ವಿನಯ ಕುಮಾರ್ ಕಂದಡ್ಕ, ಕೇಶವ ಭಟ್ ಮುಳಿಯ, ಸುಭೋದ್ ಶೆಟ್ಟಿ ಮೇನಾಲ, ಶ್ರೀಕಾಂತ್ ಮಾವಿನಕಟ್ಟೆ, ನ.ಪಂ.ಸದಸ್ಯರುಗಳಾದ ಬಾಲಕೃಷ್ಣ ರೈ, ಶಶಿಕಲಾ ಎ. ನೀರಬಿದಿರೆ ಮೊದಲಾದವರು, ದೈವಸ್ಥಾನ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.