ಪಂಜ ದೇವಾಲಯಕ್ಕೆ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

0

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮಾ.23‌ರಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಭಟ್, ಅರ್ಚಕರಾದ ಶಿವ ಕೇಶವ ಅಸ್ರಣ್ಣ,ನರೇಶ್ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ ಬಳ್ಪ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಾದ ರಜಿತ್ ಭಟ್ ಪಂಜಬೀಡು, ಮಹಾಲಿಂಗ ಸಂಪ, ರೋಹಿತ್ ಪಂಬೆತ್ತಾಡಿ, ಅಚ್ಚುತ ಮಲ್ಕಜೆ, ವಿಶ್ವಜಿತ್ ಪಳಂಗಾಯ ಮೊದಲಾದವರು ಉಪಸ್ಥಿತರಿದ್ದರು.