ಐವರ್ನಾಡು : ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

0
     ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ  5 ಗೋಣಿ ಚೀಲ ಅಡಿಕೆಯನ್ನು ಕಳವುಗೈದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಾ.14 ರಂದು ಯಾರೋ ಕಳ್ಳರು ಕಳವು ಮಾಡಿದ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದು ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಕಳವು ಮಾಡಿದ ಸುಪ್ರೀತ್‌ ಕೆ (20) ಕೊಡೆಂಚಿಕಾರ್‌ ಮನೆ, ಮಂಡೆಕೋಲು ಗ್ರಾಮ, ಸುಳ್ಯ ತಾಲೂಕು ಎಂಬಾತನನ್ನು ವಶಕ್ಕೆ ಪಡೆದು 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾ ವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಪ್ರಕರಣದ ಪತ್ತೆಗಾಗಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಸಿ .ಬಿ ರಿಷ್ಯಂತ್‌ ಐಪಿಎಸ್‌ ರವರು ನಿರ್ದೇಶನದಂತೆ , ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಜಗದೀಶ ಎಂ, KSPS ಮತ್ತು ರಾಜೇಂದ್ರ KSPS ರವರುಗಳ ಮಾರ್ಗದರ್ಶನದಲ್ಲಿ ಅರಣ್‌ ನಾಗೇ ಗೌಡ , ಪೊಲೀಸ್‌ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ , ಪುತ್ತೂರುರವರ ನೇತೃತ್ವದಲ್ಲಿ ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ಮುಂದಾಳತ್ವ ದಲ್ಲಿ , ಸಂತೋಷ್‌ ಬಿ ಪಿ ಪೊಲೀಸ್‌ ಉಪನಿರೀಕ್ಷಕರು , ಬೆಳ್ಳಾರೆ ಪೊಲೀಸ್‌ ಠಾಣೆ ರವರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ. ತನಿಖಾ ತಂಡದಲ್ಲಿ ಬೆಳ್ಳಾರೆ ಪೊಲೀಸ್‌ ಠಾಣಾ ಸಿಬ್ಬಂಧಿಗಳಾದ ನವೀನ ಕೆ, ಕೃಷ್ಣಪ್ಪ, ದೇವರಾಜ್‌ , ಸಂತೋಷ್‌ ಕೆ ಜಿ , ಸುಭಾಸ್‌ ಕಿತ್ತೂರ, ಪುರಂದರ ,ಮತ್ತು ತಾಂತ್ರಿಕ ವಿಭಾಗದ ದಿವಾಕರ , ಸಂಪತ್‌ ರವರುಗಳು ಕಾರ್ಯನಿರ್ವಹಿಸಿರುತ್ತಾರೆ. ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದು ,ಸಾರ್ವಜನಿಕ ವಲಯದಲ್ಲಿಯೂ ಪ್ರಶಂಸೆ ವ್ಯಕ್ತವಾಗಿರುತ್ತದೆ.