ಕೊಯನಾಡು ಮಸೀದಿ ವತಿಯಿಂದ ಶಾಸಕ ಎ.ಎಸ್. ಪೊನ್ನಣ್ಣರಿಗೆ ಸನ್ಮಾನ

0

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರನ್ನು ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಮಸೀದಿಯ ವತಿಯಿಂದ ಮಾ.24ರಂದು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾದಿ ಮಹಲ್ ಹಾಗೂ ಮಸೀದಿಯ ದುರಸ್ತಿಗೆ ಅನುದಾನ ಒದಗಿಸುವಂತೆ ಮಸೀದಿಯ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೊಡಗು ಜಿಲ್ಲಾ ಕಾಂಗ್ರೆಸ್ ನಾಯಕರು, ಸಂಪಾಜೆ ವಲಯ ಅಧ್ಯಕ್ಷರು ಸದಸ್ಯರು,ಜಮಾತ್ ಅಧ್ಯಕ್ಷರು ಸರ್ವ ಸದಸ್ಯರು, ಜಮಾಅತರು, ಉಪಸ್ಥಿತರಿದ್ದರು.